ಮೈಸೂರು: ದೇಶದಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ ಆ ಒಂದು ದೃಷ್ಟಿಯಿಂದ ಎಲ್ಲಾ ಮಿತ್ರ ಪಕ್ಷಗಳು ಒಗ್ಗೂಡಿ ದೇಶದಲ್ಲಿ ನಡೆಯುತ್ತಿರುವ ದುರಾಡಳಿತ ವಿರುದ್ಧ ಒಂದು ತೀರ್ಮಾನ ಮಾಡುತ್ತಾರೆ. ಒಗ್ಗಟ್ಟಾಗಿ ಮುಂಬರುವ ಲೋಕಸಭಾ ಚುನಾವಣೆ ತಯಾರಿ ನಡೆಯುತ್ತದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಸೋಮವಾರ ನಡೆಯುವ ಕಾಂಗ್ರೆಸ್ ಮಿತ್ರ ಪಕ್ಷಗಳ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳು ಆಗಿವೆ. ದೇಶದಲ್ಲಿರುವ ಎಲ್ಲಾ ಪ್ರತಿಪಕ್ಷಗಳು ಭಾಗಿಯಾಗುತ್ತವೆ. ಯಾರು ಸಂವಿಧಾನ ಪ್ರಜಾಪ್ರಭುತ್ವ ಉಳಿಸಬೇಕು ಎಂದು ಬಯಸುತ್ತಾರೆ ಅವರೆಲ್ಲರೂ ಭಾಗಿಯಾಗುತ್ತಾರೆ ಎಂದರು.
ದಸರಾ ಸಿದ್ಧತೆ ಬಗ್ಗೆ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಇಂದು ಅಧಿಕಾರಿಗಳ ಸಭೆ ಕರೆದಿದ್ದೇನೆ. ದಸರಾ ಜಂಬೂಸವಾರಿಗೆ ಆನೆಗಳು ಇನ್ನಿತರ ತಯಾರಿ ಬಗ್ಗೆ ಸವಿಸ್ತಾರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದೇನೆ. ವಿಶೇಷವಾಗಿ ಈ ಮೃಗಾಲಯದಲ್ಲಿ ಐದು ಸಿಂಹಗಳಿವೆ. ರಾಜು ಮತ್ತು ನಿರ್ಭಯ ಸಿಂಹಗಳಿಗೆ ಜನಿಸಿದ ಮೂರು ಮರಿಗಳಿಗೆ ಇಂದು ಸೂರ್ಯ, ಚಂದ್ರ, ಕಬಿನಿ ಎಂದು ನಾಮಕರಣ ಮಾಡಿದ್ದೇವೆ. ಇಲ್ಲಿನ ಅಧಿಕಾರಿಗಳು ಮೃಗಾಲಯವನ್ನು ತುಂಬಾ ಚೆನ್ನಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಲಕ್ಷಾಂತರ ಜನ ಮೃಗಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ನಮ್ಮ ಮುಂದಿನ ಪೀಳಿಗೆಗೆ ಪ್ರಾಣಿಗಳ ಕುರಿತು ತಿಳುವಳಿಕೆ ನೀಡುವಲ್ಲಿ ಮೃಗಾಲಯ ಪ್ರಮುಖವಾಗುತ್ತಿದೆ. ನನ್ನ ಇಲಾಖೆಯ ವತಿಯಿಂದ ಮೃಗಾಲಯದ ಅಭಿವೃದ್ಧಿಯ ಕುರಿತು ಸಭೆಯನ್ನು ನಡೆಸುತ್ತೇನೆ ಎಂದು ಈಶ್ವರ ಖಂಡ್ರೆ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.