ಮನೆ Uncategorized ದೇಶದ ವಿಪಕ್ಷಗಳ ಕಥೆ ಎತ್ತು ಏರಿಗೆ ಎಳೆದ್ರೆ, ಕೋಣ ನೀರಿಗೆ ಎಳೀತು ಎಂಬಂತಾಗಿದೆ: ಬಿ ವೈ...

ದೇಶದ ವಿಪಕ್ಷಗಳ ಕಥೆ ಎತ್ತು ಏರಿಗೆ ಎಳೆದ್ರೆ, ಕೋಣ ನೀರಿಗೆ ಎಳೀತು ಎಂಬಂತಾಗಿದೆ: ಬಿ ವೈ ವಿಜಯೇಂದ್ರ

0

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ದೇಶದ ಎಲ್ಲಾ ವಿಪಕ್ಷಗಳು ಒಗ್ಗೂಡಿ ಸಭೆ ಮಾಡ್ತಿವೆ. ದೇಶದ ವಿಪಕ್ಷಗಳ ಕಥೆ ಎತ್ತು ಏರಿಗೆ ಎಳೆದ್ರೆ, ಕೋಣ ನೀರಿಗೆ ಎಳೀತು ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕ ಬಿ ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

Join Our Whatsapp Group

ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೋದಿಜಿ ನಾಯಕತ್ವವನ್ನು ಜಗತ್ತು ಕೊಂಡಾಡುವಾಗ, 20ಕ್ಕೂ ಹೆಚ್ಚು ರಾಷ್ಟ್ರಗಳು ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿವೆ. ಆದ್ರೆ ನಮ್ಮ ದೇಶದ ವಿಪಕ್ಷಗಳಿಗೆ ದೇಶ ಕಟ್ಟುವ ಚಿಂತನೆ ಇಲ್ಲ ಎಂದು ಕಿಡಿಕಾರಿದರು.

ಹೇಗಾದರೂ ಮಾಡಿ ಮತ್ತೆ ಅಧಿಕಾರಕ್ಕೆ ಬರಬೇಕು ಅನ್ನೋದು ಅವರ ಉದ್ದೇಶ. ಮತ್ತೆ ಮೋದಿ ಪ್ರಧಾನಿ ಆಗಬಾರದು ಅನ್ನೋ ಒನ್ ಲೈನ್ ಅಜೆಂಡಾ ಇವರದ್ದು. ಅವರಿಗೆ ಶುಭವಾಗಲಿ, ನಿವೇನೇ ಮಾಡಿದ್ರು ಜನ ಇದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮೂರನೇ ಬಾರಿ ಮೋದಿ ಪ್ರಧಾನಿ ಆಗೋದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಜೆಡಿಎಸ್ ಜೊತೆ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿ, ನನಗೂ ಆ ವಿಚಾರ ಗೊತ್ತಿಲ್ಲ. ಮಾಧ್ಯಮದಲ್ಲಿ ನೋಡಿ ತಿಳಿದುಕೊಂಡೆ‌. ನಾನು ಮೊದಲ ಬಾರಿ ಶಾಸಕನಾಗಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಯಾವುದೇ ತೀರ್ಮಾನ ತೆಗೆದುಕೊಳ್ಳಲಿ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

ಮಾಜಿ ಸಚಿವ ವಿ ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ವಿಚಾರವಾಗಿ ವಿಜಯೇಂದ್ರ ಅವರು ನಮ್ಮ ಬೆಂಬಲ ಇದೆ ಎಂದು ತಿಳಿಸಿದ್ದಾರೆ.

ಮಳೆ ಕೊರತೆ, ರೈತರ ಆತ್ಮಹತ್ಯೆಯ ವಿಚಾರವಾಗಿ ಮಾತನಾಡಿ, ಪಕ್ಷದ ಹಿರಿಯ ನಾಯಕರ ಜೊತೆ ಚರ್ಚೆ ಮಾಡ್ತೀವಿ. ಸದನದಲ್ಲಿ ಇದು ಚರ್ಚೆಯಾಗಬೇಕು. ಮಳೆ‌ ಮುಂದುವರೆದು ಹೋಗ್ತಿದೆ. ರೈತರ ಬಗ್ಗೆ ಗಂಭೀರವಾಗಿ ಪರಿಗಣಿಸಿ ಚರ್ಚೆ ಮಾಡಬೇಕು. ಆಡಳಿತ ಪಕ್ಷ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.