ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಟನೆಯ ಕೌಸಲ್ಯ ಸುಪ್ರಜಾ ರಾಮ ಚಿತ್ರಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ಸಿಕ್ಕಿದ್ದು, ಶಶಾಂಕ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರದ ಟ್ರೇಲರ್ ಅನ್ನು ಸುದೀಪ್ ಅನಾವರಣಗೊಳಿಸಿದ್ದಾರೆ.
ಈ ವೇಳೆ ಮಾತನಾಡಿದ ಸುದೀಪ್, ಟ್ರೇಲರ್ ನಲ್ಲಿ ಬಹಳ ಒಳ್ಳೆಯ ಕಥೆ ಕಂಡೆ. ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷವಿದೆ. ಶಶಾಂಕ್ ಎಮೋಷನ್ ಗಳನ್ನು ಹಿಡಿದಿಡುವ ರೀತಿ ನನಗಿಷ್ಟ. ಹಾಡುಗಳು ಚೆನ್ನಾಗಿವೆ. ಚಿತ್ರವೂ ಸಹ ಚೆನ್ನಾಗಿ ಮೂಡಿ ಬಂದಿರುತ್ತದ್ದು , ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.
ನಟ ಕೃಷ್ಣ ಮಾತನಾಡಿ, ನಾನು ಇಷ್ಟು ವರ್ಷಗಳಲ್ಲಿ ಕೇಳಿರುವ ದಿ ಬೆಸ್ಟ್ ಕಥೆ ಇದು. ಚಿತ್ರದಲ್ಲಿ ಸಾಕಷ್ಟು ವಿಷಯಗಳನ್ನು ಮನರಂಜನಾತ್ಮಕವಾಗಿ ಹೇಳಿದ್ದಾರೆ. ಈ ಸಿನಿಮಾ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದರು.
ನಿರ್ದೇಶಕ ಶಶಾಂಕ್ ಮಾತನಾಡಿ, ಕಥೆಗೆ ಹಲವು ಆಯಾಮಗಳಿವೆ. ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ರಿಲೇಟ್ ಆಗಲಿದೆ ಎಂದು ತಿಳಿಸಿದರು. ಕೃಷ್ಣ ಅವರನ್ನು ಬೇರೆ ತರಹ ತೋರಿಸುವ ಪ್ರಯತ್ನ ಮಾಡಿದ್ದೇನೆ. ಈ ಚಿತ್ರ ಜುಲೈ 28ಕ್ಕೆ ಬಿಡುಗಡೆಯಾಗುತ್ತಿದೆ ಎಂದು ಹೇಳಿದರು.
ಚಿತ್ರ ನಿರ್ಮಾಪಕ ಬಿ. ಸಿ. ಪಾಟೀಲ್ ಮಾತನಾಡಿ, ಈ ಸಿನಿಮಾದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಮ್ಮ ಕೌರವ ಪ್ರೊಡಕ್ಷನ್ ಹೌಸ್ ಹಾಗೂ ಶಶಾಂಕ್ ಸಿನಿಮಾಸ್ ಜೊತೆ ಸೇರಿ ಚಿತ್ರ ನಿರ್ಮಾಣ ಮಾಡಿದ್ದೇವೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಸುದೀಪ್ ಅವರಿಗೆ ಧನ್ಯವಾದವೆಂದರು.
ಈ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನಿರ್ದೇಶ ಮಾಡಿದ್ದರೆ ಹಾಡುಗಳು ಚೆನ್ನಾಗಿ ಮೂಡಿ ಬಂದಿವೆ.
ಈ ಚಿತ್ರ ಜುಲೈ 28ಕ್ಕೆ ಬಿಡುಗಡೆಯಾಗುತ್ತಿದೆ ಎಂದು ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.