ಮನೆ ಅಪರಾಧ ಬಸ್-ಕಾರಿನ ನಡುವೆ ಅಪಘಾತ: ಓರ್ವನಿಗೆ ಗಂಭೀರ ಗಾಯ

ಬಸ್-ಕಾರಿನ ನಡುವೆ ಅಪಘಾತ: ಓರ್ವನಿಗೆ ಗಂಭೀರ ಗಾಯ

0

ತೀರ್ಥಹಳ್ಳಿ: ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡು, ಇಬ್ಬರಿಗೆ ಸಣ್ಣಪುಟ್ಟ  ಗಾಯಗಳಾದ ಘಟನೆ ತಾಲೂಕಿನ ಮೇಗರವಳ್ಳಿ ಸಮೀಪದ ಕೊಳಿಗೆ ಇಂದು ಬೆಳಗ್ಗೆ ನಡೆದಿದೆ.

Join Our Whatsapp Group

ಹಾಲಾಡಿ ಮೂಲದ ಕುಟುಂಬ ಶಿವಮೊಗ್ಗ ಆಸ್ಪತ್ರೆಗೆ ಕಾರಿನಲ್ಲಿ ಹೋಗುತ್ತಿರುವಾಗ ತೀರ್ಥಹಳ್ಳಿಯಿಂದ ಬಿದರಗೋಡು ಕಡೆಗೆ ಹೋಗುತ್ತಿರುವ ಖಾಸಗಿ ಬಸ್ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ.

ಢಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಅವರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.