ಮೈಸೂರು: ಗಂಧದ ಮರದ ತುಂಡುಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಮೈಸೂರಿನ ಕೆ.ಆರ್. ಠಾಣೆ ಪೊಲೀಸರು ಬಂಧಿಸಿದ್ದಾರೆ
ಕೆ.ಆರ್. ನಗರ ತಾಲೂಕು ಚುಂಚನಕಟ್ಟೆ ಹೋಬಳಿ, ಶ್ರೀರಾಂಪುರ ಗ್ರಾಮದ ಲೇಟ್ ತಿಪ್ಪಯ್ಯ ಅವರ ಮಗ ದೊರೆಸ್ವಾಮಿ ಬಂದಿತ ಆರೋಪಿ ಜುಲೈ 4 ಶ್ರೀರಂಗಪಟ್ಟಣ ತಾಲ್ಲೂಕು ಕರಿಗಟ್ಟ ಗ್ರಾಮದಲ್ಲಿ ಆತನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಗಂಧದ ಮರದ ತುಂಡುಗಳನ್ನು ಕಳುವು ಮಾಡಿದ ದೊರೆ ಸ್ವಾಮಿ ವಿರುದ್ಧ ಮೈಸೂರಿನ ಕೆ.ಆರ್. ಠಾಣೆಯಲ್ಲಿ ಕರ್ನಾಟಕ ಅರಣ್ಯ ಕಾಯ್ದೆ ಕಲಂ 86, 87 ಹಾಗೂ ಐಪಿಸಿ ಸೆಕ್ಷನ್ 379 ರೀತ್ಯಾ 2001 ಮಾರ್ಚ್ 27 ರಂದು ಪ್ರಕರಣ ದಾಖಲು ಮಾಡಲಾಗಿತ್ತು.
ನಂತರ 2003 ರಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರಿಸಿಕೊಂಡಿದ್ದ ಆರೋಪಿ ಪತ್ತೆ ಕಾರ್ಯಕ್ಕೆ ಕೆ.ಆರ್ ಠಾಣೆ ಎ.ಎಸ್.ಐ ಚಂದ್ರ ನಾಯಕ ಹಾಗೂ ಹೆಡ್ ಕಾನ್ಸ್ಟೇಬಲ್ ಹರೀಶ್ ನೇಮಿಸಲಾಗಿತ್ತು. ಶ್ರೀರಾಂಪುರ ಗ್ರಾಮಕ್ಕೆ ತೆರಳಿ ವಿಚಾರಿಸಿದಾಗ ದೊರೆ ಸ್ವಾಮಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿದ್ದಾನೆ ಎಂಬುದು ತಿಳಿಯಿತು.
ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಳಿವಿನ ಜಾಡು ಹಿಡಿದು ಕಡೆಗೂ ಕರಿಘಟ್ಟದಲ್ಲಿ ಜುಲೈ 4ರಂದು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾದರು. ಡಿ.ಸಿ.ಪಿ. ಎಸ್ ಜಹ್ನಾವಿ ಮಾರ್ಗದರ್ಶನದಂತೆ, ಕೆ.ಆರ್. ವಿಭಾಗದ ಎ.ಸಿ.ಪಿ ಗಂಗಾಧರ ಸ್ವಾಮಿ ನೇತೃತ್ವದಲ್ಲಿ ಕೆ.ಆರ್. ಠಾಣೆ ಇನ್ಸ್ಪೆಕ್ಟರ್ ಮಹೇಶ್, ಎ. ಎಸ್.ಐ ಚಂದ್ರನಾಯಕ, ಹೆಡ್ ಕಾನ್ಸ್ಟೇಬಲ್ ಹರೀಶ್ ಪತ್ತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ನಗರದ ಪೊಲೀಸ್ ಆಯುಕ್ತ ಬಿ. ರಮೇಶ್ ಈ ಪತ್ತೆ ಕಾರ್ಯವನ್ನು ಪ್ರಶಂಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.