ಬೆಂಗಳೂರು: ತಾಜ್ ವೆಸ್ಟ್ ಎಂಡ್ ಸಭೆ ನಡೆಸಿದ ವಿಪಕ್ಷಗಳು ಮಹಾಘಟಬಂಧನಕ್ಕೆ ಇಂಡಿಯಾ ಎಂದು ಹೆಸರಿಟ್ಟಿದ್ದು, ಮುಂಬೈನಲ್ಲಿ ಮುಂದಿನ ಸಭೆ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಘೋಷಿಸಿದರು.
ಸುದ್ದಿಗೊಷ್ಠಿಯಲ್ಲಿ ಭಾಗಿಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಎಲ್ಲರೂ ಈ ಹೆಸರಿಗೆ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. ಇಂಡಿಯಾ ಅಂದರೆ ಇಂಡಿಯನ್ ನ್ಯಾಶನಲ್ ಡೆಮಾಕ್ರಟಿಕ್ ಇನ್ಕ್ಲೂಸೀವ್ ಅಲಯನ್ಸ್ ಒಕ್ಕೂಟ.
I: Indian
N: National
D: Democractic
I: Inclusive
A: Alliance
ಎಲ್ಲ 26 ಪಕ್ಷದ ನಾಯಕರ ಸಭೆ ಮಾಡಿದ್ದೇವೆ. ಸೋನಿಯಾ ಗಾಂಧಿ ಹಾಗೂ 26 ಪಕ್ಷದ ಹಿರಿಯ ನಾಯಕರು ಭಾಗಿಯಾಗಿದ್ದು, ಬಹಳ ಮಹತ್ವದ ಸಭೆ ಮಾಡಿದ್ದೇವೆ. ಪ್ರಜಾಪ್ರಭುತ್ವ ಉಳಿವಿಗಾಗಿ ಸಭೆ ಮಾಡಿದ್ದೇವೆ. ಒಟ್ಟಾಗಿ ಸೇರಿ ಒಂದೇ ಧ್ವನಿ ಎತ್ತಲಿದ್ದೇವೆ ಎಂದಿದ್ದಾರೆ.
26 ಪ್ರಮುಖ ಪಕ್ಷಗಳ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. 2024ರ ಚನಾವಣೆಯಲ್ಲಿ ಮೋದಿ ಸೋಲಿಸಲು ಎಲ್ಲಾ ಪಕ್ಷಗಳ ಒಗ್ಗಟ್ಟಿನ ಮಂತ್ರ, ಸಿದ್ಧಾಂತ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ. ಇದೇ ಸಭೆಯಲ್ಲಿ ವಿಪಕ್ಷಗಳ ಒಕ್ಕೂಟಕ್ಕೆ ಹೊಸ ನಾಮಕರಣ ಮಾಡಲು ಚರ್ಚೆ ನಡೆದಿದೆ.
ಮುಂದಿನ ಸಭೆಯನ್ನು ಮುಂಬೈನಲ್ಲಿ ನಡೆಸಲಾಗುತ್ತದೆ. ಬಿಜೆಪಿಯು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ಸರ್ಕಾರದ ಸಂಸ್ಥೆಗಳಾದ ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷವನ್ನು ಹೆಣೆಯುತ್ತಿದೆ. ನಮಗೆ ದೇಶ ಮುಖ್ಯ. ರಾಜಕೀಯವಾಗಿ ನಮಗೆ ರಾಜ್ಯವಾರು ವಿಭಿನ್ನತೆ ಬೇರೆ ಇರಬಹುದು. ಆದರೆ ದೇಶದ ಉದ್ದೇಶಕ್ಕೆ ಎಲ್ಲರೂ ಒಗ್ಗಟ್ಟಾಗಿ ಹೋಗಲು ನಿರ್ಣಯಿಸಲಾಗಿದೆ. ಪಾಟ್ನಾ ಸಭೆಯಲ್ಲಿ 16 ಪಕ್ಷಗಳು ಇದ್ದವು, ಈ ಸಭೆಗೆ 26 ಪಕ್ಷಗಳು ಬಂದಿವೆ. ಮೋದಿ ಕರೆದ ಸಭೆಗೆ ಮೂವತ್ತು ಪಕ್ಷಗಳ ಸಭೆ ನಡೆಸಿದ್ದಾರೆ. ಆ ಪಕ್ಷಗಳು ನೋಂದಣಿಯಾಗಿವೆಯೇ? ಅವುಗಳನ್ನು ಇಲ್ಲೆಲ್ಲೂ ನೋಡಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸುದ್ದಿಗೊಷ್ಠಿಯಲ್ಲಿ ರಾಹುಲ್ ಗಾಂಧಿ ಮಮತಾ ಬ್ಯಾನರ್ಜಿ, ಶರದ್ ಪವಾರ್, ಸೀತಾರಾಮ ಯಚೂರಿ,ಅರವಿಂದ್ ಕೆಜ್ರಿವಾಲ್, ಉದ್ದವ್ ಠಾಕ್ರೆ, ಸಿದ್ದರಾಮಯ್ಯ, ಭಗವಂತ್ ಮಾನ್, ವೇಣುಗೋಪಾಲ, ಡಿ ಕೆ ಶಿವಕುಮಾರ್ ಸುದ್ದಿಗೊಷ್ಠಿಯಲ್ಲಿ ಭಾಗಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.