ಮನೆ ರಾಜ್ಯ ಹುಣಸೂರು: ಹೊಲದಲ್ಲಿ ಬೆಳೆದಿದ್ದ ಶುಂಠಿ ಕದ್ದೊಯ್ದ ಕಳ್ಳರು

ಹುಣಸೂರು: ಹೊಲದಲ್ಲಿ ಬೆಳೆದಿದ್ದ ಶುಂಠಿ ಕದ್ದೊಯ್ದ ಕಳ್ಳರು

0

ಹುಣಸೂರು: ಹೊಲದಲ್ಲಿ ಬೆಳೆದಿದ್ದ ಶುಂಠಿ ಬೆಳೆಯನ್ನು ಕಳ್ಳರು ರಾತ್ರಿ ವೇಳೆ ಕಿತ್ತು ಕದ್ದೊಯ್ದಿರುವ ಘಟನೆ ತಾಲೂಕಿನ ಸಣ್ಣೇನಹಳ್ಳಿಯಲ್ಲಿ ನಡೆದಿದೆ.

Join Our Whatsapp Group

ತಾಲೂಕಿನ ಹನಗೋಡು ಹೋಬಳಿಯ ಸಣ್ಣೇನಹಳ್ಳಿ ಚಂದ್ರೇಗೌಡರ ಜಮೀನಿನಲ್ಲಿ ಈ ಘಟನೆ ನಡೆದಿದೆ.

ತಾಲೂಕಿನ ಚೆನ್ನಸೋಗೆಯ ಪ್ರಸನ್ನಕುಮಾರ್ ಹೊಸಕೋಟೆಯ ಶ್ರೀನಿವಾಸ್, ದೇವೇಂದ್ರ ಸೇರಿದಂತೆ ಮೂವರು ಸಣ್ಣೆನಹಳ್ಳಿಯ ಚಂದ್ರೇಗೌಡ ಮತ್ತಿತರ ರೈತರಿಂದ ಒಟ್ಟು 15 ಎಕರೆ ಜಮೀನನ್ನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಶುಂಠಿ ಬೆಳೆಯೂ ಉತ್ತಮವಾಗಿ ಬಂದಿದ್ದು, ಶನಿವಾರ ರಾತ್ರಿ ಯಾರೋ ಕಳ್ಳರು ಸುಮಾರು ಅರ್ಧ ಎಕರೆಯಷ್ಟು 5 ಲಕ್ಷ ರೂ. ಬೆಲೆಬಾಳುವ ಶುಂಠಿ ಬೆಳೆಯನ್ನು ಕಳುವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.