ಮನೆ ಸ್ಥಳೀಯ ಹುಣಸೂರು: ಮೇಕೆ, ಬೀದಿನಾಯಿಗಳನ್ನು ಬಲಿ ಪಡೆದಿದ್ದ ಚಿರತೆ ಸೆರೆ

ಹುಣಸೂರು: ಮೇಕೆ, ಬೀದಿನಾಯಿಗಳನ್ನು ಬಲಿ ಪಡೆದಿದ್ದ ಚಿರತೆ ಸೆರೆ

0

ಹುಣಸೂರು: ಹಲವಾರು ಮೇಕೆ, ಬೀದಿನಾಯಿಗಳನ್ನು ಬಲಿ ಪಡೆದು ವದ್ಲಿಮನುಗನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರನ್ನು ಭಯಬೀತಗೊಳಿಸಿದ್ದ ಚಿರತೆ ಸೆರೆ ಸಿಕ್ಕಿದೆ.

Join Our Whatsapp Group

ಹುಣಸೂರು ತಾಲೂಕಿನ ವದ್ಲಿಮನುಗನಹಳ್ಳಿಯಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಈವರೆಗೆ ಮೂರು ಮೇಕೆಗಳು ಹಾಗೂ ಹಲವಾರು ಬೀದಿ ನಾಯಿಗಳನ್ನು ಕೊಂದುಹಾಕಿದ್ದ ಚಿರತೆಯು ಕಳೆದ ಒಂದೂವರೆ ತಿಂಗಳಿನಿಂದ ಗ್ರಾಮಸ್ಥರನ್ನು ಭಯ ಭೀತಗೊಳಿಸಿತ್ತು. ಮೂರು ದಿನಗಳ ಹಿಂದೆ ಗ್ರಾಮದ ಕುಮಾರನಾಯಕರ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಮೇಕೆಯನ್ನು ಕೊಂದು ಹಾಕಿತ್ತು. ಕೊಂದು ಹಾಕಿದ್ದ ಮೇಕೆಯ ಮಾಂಸವನ್ನು ಬೋನಿನಲ್ಲಿಟ್ಟು ಸೆರೆಗೆ ಬಲೆ ಬೀಸಲಾಗಿತ್ತು. ಕೊನೆಗೂ ತಾನೇ ಬೇಟೆಯಾಡಿದ್ದ ಮೇಕೆ ಮಾಂಸ ತಿನ್ನಲು ಬಂದ ನಾಲ್ಕು ವರ್ಷದ ಹೆಣ್ಣು ಚಿರತೆ ಬೋನಿನಲ್ಲಿ ಬಂಧಿಯಾಗಿದೆ.

ಊರಿನ ಸಾಕು ಪ್ರಾಣಿಗಳನ್ನು ಬೇಟೆಯಾಡಲಾರಂಭಿಸಿದ ಚಿರತೆಯಿಂದ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಎರಡು ದಿನಗಳ ಹಿಂದೆ ಮತ್ತೆ ಬೋನ್ ಇರಿಸಿ ಚಿರತೆ ಸೆರೆಗೆ ಕ್ರಮವಹಿಸಿದ್ದ ಅರಣ್ಯ ಸಿಬ್ಬಂದಿಗಳು ಕೊನೆಗೂ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.

ಸೆರೆ ಸಿಕ್ಕಿದ್ದ ಚಿರತೆಯನ್ನು ನಾಗರಹೊಳೆ ಉದ್ಯಾನದಲ್ಲಿ ಬಂಧ ಮುಕ್ತಗೊಳಿಸಲಾಯಿತೆಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.