ಹುಣಸೂರು: ಹಲವಾರು ಮೇಕೆ, ಬೀದಿನಾಯಿಗಳನ್ನು ಬಲಿ ಪಡೆದು ವದ್ಲಿಮನುಗನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರನ್ನು ಭಯಬೀತಗೊಳಿಸಿದ್ದ ಚಿರತೆ ಸೆರೆ ಸಿಕ್ಕಿದೆ.
ಹುಣಸೂರು ತಾಲೂಕಿನ ವದ್ಲಿಮನುಗನಹಳ್ಳಿಯಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಈವರೆಗೆ ಮೂರು ಮೇಕೆಗಳು ಹಾಗೂ ಹಲವಾರು ಬೀದಿ ನಾಯಿಗಳನ್ನು ಕೊಂದುಹಾಕಿದ್ದ ಚಿರತೆಯು ಕಳೆದ ಒಂದೂವರೆ ತಿಂಗಳಿನಿಂದ ಗ್ರಾಮಸ್ಥರನ್ನು ಭಯ ಭೀತಗೊಳಿಸಿತ್ತು. ಮೂರು ದಿನಗಳ ಹಿಂದೆ ಗ್ರಾಮದ ಕುಮಾರನಾಯಕರ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಮೇಕೆಯನ್ನು ಕೊಂದು ಹಾಕಿತ್ತು. ಕೊಂದು ಹಾಕಿದ್ದ ಮೇಕೆಯ ಮಾಂಸವನ್ನು ಬೋನಿನಲ್ಲಿಟ್ಟು ಸೆರೆಗೆ ಬಲೆ ಬೀಸಲಾಗಿತ್ತು. ಕೊನೆಗೂ ತಾನೇ ಬೇಟೆಯಾಡಿದ್ದ ಮೇಕೆ ಮಾಂಸ ತಿನ್ನಲು ಬಂದ ನಾಲ್ಕು ವರ್ಷದ ಹೆಣ್ಣು ಚಿರತೆ ಬೋನಿನಲ್ಲಿ ಬಂಧಿಯಾಗಿದೆ.
ಊರಿನ ಸಾಕು ಪ್ರಾಣಿಗಳನ್ನು ಬೇಟೆಯಾಡಲಾರಂಭಿಸಿದ ಚಿರತೆಯಿಂದ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಎರಡು ದಿನಗಳ ಹಿಂದೆ ಮತ್ತೆ ಬೋನ್ ಇರಿಸಿ ಚಿರತೆ ಸೆರೆಗೆ ಕ್ರಮವಹಿಸಿದ್ದ ಅರಣ್ಯ ಸಿಬ್ಬಂದಿಗಳು ಕೊನೆಗೂ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.
ಸೆರೆ ಸಿಕ್ಕಿದ್ದ ಚಿರತೆಯನ್ನು ನಾಗರಹೊಳೆ ಉದ್ಯಾನದಲ್ಲಿ ಬಂಧ ಮುಕ್ತಗೊಳಿಸಲಾಯಿತೆಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.