ರಾಮನಗರ: ಕ್ಷುಲ್ಲಕ ಕಾರಣಕ್ಕೆ ಮಗಳೊಬ್ಬಳು ತನ್ನ ತಂದೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಮೃತನನ್ನು ಹುಚ್ಚೀರಯ್ಯ(68) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಮಗಳನ್ನು ಪುಷ್ಪ (30) ಎಂದು ಗುರುತಿಸಲಾಗಿದೆ.
ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ಘಟನೆ ನಡೆದಿದೆ. ಪುಷ್ಪಾ ಗೃಹಿಣಿಯಾಗಿದ್ದು, ಕೆಲವು ವರ್ಷಗಳ ಹಿಂದೆ ತನ್ನ ಪತಿಯೊಂದಿಗೆ ಜಗಳವಾಡಿಕೊಂಡು ಬಂದು ಪೋಷಕರ ಮನೆಗೆ ಮರಳಿದ್ದಳು. ಕೆಲಕಾಲ ಮಾನಸಿಕವಾಗಿ ನೊಂದಿದ್ದಳು.
ಮನೆಯಲ್ಲಿ ಊಟ ಮಾಡುವ ವೇಳೆ ತಂದೆ ಮತ್ತು ಮಗಳ ನಡುವೆ ಜಗಳ ಆರಂಭವಾಗಿದೆ, ಈ ವೇಳೆ ನಿಯಂತ್ರಣ ತಪ್ಪಿದ ಪುಷ್ಪ ಗುದ್ದಲಿಯಿಂದ ಅಪ್ಪನ ತಲೆಗೆ ಹೊಡೆದಿದ್ದಾಳೆ. ಪರಿಣಾಮ ಹುಚ್ಚೀರಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಗಲಾಟೆ ಕೇಳಿ ಸ್ಥಳಕ್ಕೆ ಧಾವಿಸಿದ ನೆರೆಹೊರೆಯವರು ಚನ್ನಪಟ್ಟಣ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿ ಮಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.