ಮೈಸೂರು: ರಾಜ್ಯದಲ್ಲಿ ಮೊನ್ನೆ ವಿಪಕ್ಷಗಳು ಸಭೆ ನಡೆಸಿದ್ದರು. ಅವರು ಸಭೆ ನಡೆಸಿದ್ದಕ್ಕೆ ನಮಗೆ ತಕರಾರಿಲ್ಲ. ಆ ಸಭೆಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಕ್ಕೆ ನಮ್ಮ ವಿರೋಧವಿದೆ ಎಂದು ಶಾಸಕ ಶ್ರೀವತ್ಸ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾಡಿದರು.
ಮೈಸೂರಿನ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗ ಇಂದು (ಶನಿವಾರ) ಬಿಜೆಪಿ ನಾಯಕರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರೊಟೋಕಾಲ್ ಎಲ್ಲರಿಗೂ ಅನ್ವಯಿಸುವುದಿಲ್ಲ. ನಾವು ಇದನ್ನ ಪ್ರಶ್ನೆ ಮಾಡಿದ್ದಕ್ಕೆ ನಮ್ಮ ಶಾಸಕರನ್ನು ಸದನದಿಂದ 3ದಿನಗಳ ಕಾಲ ಅಮಾನತು ಮಾಡಿದರು ಎಂದರು
ಈ ಹಿಂದೆ ಸಿದ್ದರಾಮಯ್ಯನವರು ವಿಧಾನಸೌಧದ ಬಾಗಿಲಿಗೆ ಬೂಟು ಕಾಲಿನಲ್ಲಿ ಒದ್ದರು. ಪೋಲೀಸ್ ಅಧಿಕಾರಿ ಶಂಕರ್ ಬಿದರಿ ಕೊರಳಿಗೆ ಕೈ ಹಾಕಿದ್ರು. ಶಾಸಕ ಸಂಗಮೇಶ್ ಬಟ್ಟೆ ಹರಿದುಕೊಂಡು ಸ್ಪೀಕರ್ ಗೆ ಅಗೌರವ ತೋರಿದ್ರು. ಜಮೀರ್ ಅಹ್ಮದ್ ಖಾನ್ ಸ್ಪೀಕರ್ ಬಳಿಯಿದ್ದ ಮೈಕ್ ಕಿತ್ತೆಕೊಂಡು ಅಗೌರವ ತೋರಿದ್ರು. ಆಗ ನಾವು ಇವರನ್ನ ಅಮಾನತು ಮಾಡಿದ್ವಾ ? ಎಂದು ಪ್ರಶ್ನಿಸಿದರು.
ನಾವು ಕಾಂಗ್ರೆಸ್ ಗ್ಯಾರಂಟಿ ವಿರೋಧಿಗಳಲ್ಲ. ನೀವು ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ಕೊಡಿ ಎಂದು ಹೇಳುತ್ತಿದ್ದೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಗೃಹ ಸಚಿವರು ಬೆಂಗಳೂರಿನಲ್ಲಿ ಸಿಕ್ಕ ಶಂಕಿತ ಉಗ್ರರನ್ನು ಉಗ್ರಗಾಮಿಗಳಲ್ಲ ಅಂತ ಹೇಳ್ತಾರೆ. ನಾವು ಸರ್ಕಾರದ ವೈಫಲ್ಯದ ಹೋರಾಟ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿಯು ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.