ಮನೆ ಅಪರಾಧ ಅಪಘಾತ : ಸಂಸದ ಸಂಗಣ್ಣ ಕರಡಿ ಸಹೋದರ ಸಾವು

ಅಪಘಾತ : ಸಂಸದ ಸಂಗಣ್ಣ ಕರಡಿ ಸಹೋದರ ಸಾವು

0

ಕೊಪ್ಪಳ(Koppala) : ದ್ವಿಚಕ್ರವಾಹನ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸಂಸದ ಸಂಗಣ್ಣ ಕರಡಿ ಸಹೋದರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲ್ಲೂಕಿನ ಟಣಕನಕಲ್ ಗ್ರಾಮದಲ್ಲಿ ನಡೆದಿದೆ.

ಬಸವರಾಜ ಕರಡಿ (58) ಸ್ಥಳದಲ್ಲಿಯೇ ಸಾವಿಗೀಡಾದವರು.

ಮೃತ ಬಸವರಾಜ ಕರಡಿ ಅವರು ಕೊಪ್ಪಳದಿಂದ ಟಣಕನಕಲ್‌ಗೆ ಹೋಗುತ್ತಿದ್ದರು. ಯಲಮಗೇರಿಯಿಂದ ಕೊಪ್ಪಳಕ್ಕೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.