“ನಮ್ಮ ಶಾಲೆ ಮಕ್ಕಳಿಗೆ ಹೆಬ್ಬುಲಿ ಹೇರ್ ಕಟ್ ಮಾಡ್ಬೇಡಿ”: ಸಲೂನ್ ಮಾಲೀಕನಿಗೆ ಹೆಡ್ ಮಾಸ್ಟರ್ ಪತ್ರ. ಸ್ಯಾಂಡಲ್ವುಡ್ ಸ್ಟೈಲಿಶ್ ಆಕ್ಟರ್ಗಳ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು. ಇವರ ಸಿನಿಮಾಗಳಿಗೆ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಅಭಿಮಾನಿಗಳಿದ್ದಾರೆ. ಕಿಚ್ಚನ ಪ್ರತಿಯೊಂದು ಸಿನಿಮಾವನ್ನೂ ಫಾಲೋ ಮಾಡುತ್ತಾರೆ. ಅದರಲ್ಲೂ ಕಿಚ್ಚನ ಕಾಸ್ಟ್ಯೂಮ್, ಹೇರ್ಸ್ಟೈಲ್ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.
2017ರಲ್ಲಿ ಕಿಚ್ಚ ಸುದೀಪ್ ಅಭಿನಯದ ‘ಹೆಬ್ಬುಲಿ’ ಸಿನಿಮಾ ರಿಲೀಸ್ ಆಗಿತ್ತು. ಆ ಸಿನಿಮಾದಲ್ಲಿ ಕಿಚ್ಚನ ಹೇರ್ ಸ್ಟೈಲ್ ನೋಡಿ ಅವರ ಅಭಿಮಾನಿಗಳು ಫಿದಾ ಆಗಿದ್ದರು. ಅಂದಿನಿಂದ ‘ಹೆಬ್ಬುಲಿ’ ಸಿನಿಮಾದ ಕಿಚ್ಚನ ಹೇರ್ ಸ್ಟೈಲ್ ‘ಹೆಬ್ಬುಲಿ ಹೇರ್ ಕಟ್’ ಅಂತಲೇ ಫೇಮಸ್ ಆಯ್ತು. ಈ ಸಿನಿಮಾ ರಿಲೀಸ್ ಆಗಿ ಆರು ವರ್ಷಗಳಾಗಿದ್ದರೂ, ಹೆಬ್ಬುಲಿ ಹೇರ್ ಸ್ಟೈಲ್ ಕ್ರೇಜ್ ಮಾತ್ರ ಕಮ್ಮಿಯಾಗಿಲ್ಲ. ಇಂದಿಗೂ ಮಕ್ಕಳ ಫೇವರಿಟ್ ಹೇರ್ಸ್ಟೈಲ್ ಇದು. ಆದರೆ, ಇದೇ ವಿಚಾರವಾಗಿ ಸರ್ಕಾರಿ ಶಾಲೆಯ ಹೆಡ್ ಮಾಸ್ಟರ್ ಒಬ್ಬರು ಸಲೂನ್ ಮಾಲೀಕನಿಗೆ ಈ ಹೇರ್ ಸ್ಟೈಲ್ ಮಾಡದೇ ಇರುವಂತೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಆ ಪತ್ರವೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಹೆಡ್ ಮಾಸ್ಟರ್ ಬರೆದ ಪತ್ರದಲ್ಲೇನಿದೆ?
“ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ಶಾಲೆಯ ಗಂಡು ಮಕ್ಕಳು ‘ಹೆಬ್ಬುಲಿ’ಯಂತಹ ಇತರೆ ತರಹದ ಹೇರ್ ಕಟಿಂಗ್ (ತಲೆಯ ಒಂದು ಬದಿಗೆ ಕೂದಲು ಬಿಟ್ಟು, ಇನ್ನೊಂದು ಬದಿಗೆ ಕೂದಲು ಉಳಿಸಿಕೊಳ್ಳುವುದು) ಮಾಡಿಸಿಕೊಂಡು ಶಾಲೆಗೆ ಬರುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಕೆಗೆ ಆಸಕ್ತಿ ತೋರಿಸದೆ ಹಾಗೂ ಶೈಕ್ಷಣಿಕ ಚುಟುವಟಿಗೆಗಳಿಗೆ ಹೆಚ್ಚು ಮಹತ್ವ ನೀಡದೇ ಕಲಿಕೆಯಲ್ಲಿ ಹಿಂದೆ ಉಳಿಯುತ್ತಿದ್ದಾರೆ. ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಒಪ್ಪುವಂತಹ ಹೇರ್ ಕಟಿಂಗ್ ಮಾಡಲು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ಒಂದು ವೇಳೆ ವಿದ್ಯಾರ್ಥಿಗಳು ಹೆಬ್ಬುಲಿ ಹೇರ್ ಕಟಿಂಗ್ ಮಾಡಲು ನಿಮಗ್ಎ ಒತ್ತಾಯಿಸಿದರೆ ಅಂತಹ ವಿದ್ಯಾರ್ಥಿಗಳ ಹೆಸರನ್ನು ನನಗೆ ಅಥವಾ ಅವರ ಪಾಲಕರ ಗಮನಕ್ಕೆ ತರಲು ತಮ್ಮಲ್ಲಿ ಕೋರುತ್ತೇನೆ.” ಎಂದು ಹೆಡ್ ಮಾಸ್ಟರ್ ಶಿವಾಜಿ ನಾಯಕ ಪತ್ರ ಬರೆದಿದ್ದಾರೆ. ಇದೇ ಈಗ ವೈರಲ್ ಆಗಿದೆ.
ಈ ಹೇರ್ ಸ್ಟೈಲ್ನ ಉದ್ದೇಶವೇನು?
ಪ್ರತಿ ಶೈಕ್ಷಣಿಕ ವರ್ಷದಲ್ಲಿ ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳ ಫಲಿತಾಂಶ ಚೆನ್ನಾಗಿದೆ. ಓದಿನಲ್ಲಿ ಹೆಣ್ಣು ಮಕ್ಕಳು ಮುಂದಿದ್ದಾರೆ. ಹೀಗಾಗಿ ಶಾಲಾ ಸಿಬ್ಬಂದಿ ಹಾಗೂ ಪೋಷಕರು ಈ ವಿಚಾರವಾಗಿ ಚರ್ಚೆ ಮಾಡಿದ್ದು, ಗಂಡು ಮಕ್ಕಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗಿಯಾಗದೇ, ಹೇರ್ ಸ್ಟೈಲ್, ಡ್ರೆಸ್ ಬಗ್ಗೆನೇ ಹೆಚ್ಚು ಗಮನ ಹರಿಸುತ್ತಿದ್ದಾರೆ. ಈ ಕಾರಣದಿಂದ ಶಾಲೆಯಲ್ಲಿ ಒಂದೇ ರೀತಿಯ ಹೇರ್ ಕಟ್ ಇರಬೇಕು ಎಂಬುದು ಒಮ್ಮತದ ನಿರ್ಧಾರವಾಗಿತ್ತು. ಈ ಕಾರಣಕ್ಕೆ ಸಲೂನ್ ಮಾಲೀಕರಿಗೆ ಹೆಡ್ ಮಾಸ್ಟರ್ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಕಿಚ್ಚನ ‘ಹೆಬ್ಬುಲಿ’ ಕ್ರೇಜ್ ಕಿಚ್ಚ ಸುದೀಪ್ ‘ಹೆಬ್ಬುಲಿ’ ಸಿನಿಮಾ 2017ರಲ್ಲಿ ತೆರೆಕಂಡಿತ್ತು. ಮುಂಗಾರು ಮಳೆ ಖ್ಯಾತಿಯ ಕೃಷ್ಣ ಈ ಸಿನಿಮಾದ ನಿರ್ದೇಶನ ಮಾಡಿದ್ದರು. ರವಿಚಂದ್ರನ್ ಹಾಗೂ ಕಿಚ್ಚ ಸುದೀಪ್ ‘ಮಾಣಿಕ್ಯ’ ಬಳಿಕ ಮತ್ತೆ ಒಟ್ಟಿಗೆ ನಟಿಸಿದ್ದರು. ತಮಿಳು ನಟಿ ಅಮಲಾ ಪೌಲ್ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದೇ ಸಿನಿಮಾ ಬಾಕ್ಸಾಫೀಸ್ನಲ್ಲಿ ಗೆಲ್ಲುವುದಷ್ಟೇ ಅಲ್ಲ, ಹೇರ್ ಸ್ಟೈಲ್ ಕೂಡ ಕ್ರೇಜ ಹುಟ್ಟಾಕಿತ್ತು.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.