ಪೋರ್ಟ್ ಆಫ್ ಸ್ಪೇನ್ : ಕ್ವೀನ್ಸ್ ಪಾರ್ಕ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ಗೆ 365 ರನ್ ಗಳ ಗುರಿ ನೀಡಿದೆ. ಮೊತ್ತವನ್ನು ಬೆನ್ನತ್ತಿರುವ ವೆಸ್ಟ್ ಇಂಡೀಸ್ ನಾಲ್ಕನೇ ದಿನದಂತ್ಯಕ್ಕೆ (ಭಾನುವಾರ) 2 ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿದ್ದು, ಗೆಲುವಿಗೆ ಇನ್ನೂ 289 ರನ್ ಗಳ ಹಿನ್ನಡೆಯಲ್ಲಿದೆ.
ಎರಡನೇ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡಿದ ಭಾರತದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಉತ್ತಮ ಆಟವಾಡಿದರು.
ಆದರೆ ಜೈಸ್ವಾಲ್ 38 ರನ್ ಗಳಿಸಿದಂತೆಯೆ ಜೋಮೆಲ್ ವ್ಯಾರಿಕನ್ ಗೆ ವಿಕೆಟ್ ಒಪ್ಪಿಸಿದ್ದರು, ರೋಹಿತ್ ಶರ್ಮಾ ಕೂಡ ಅರ್ಧ ಶತಕ (57) ರನ್ ಗಳಿಸಿ ಶನನ್ ಗ್ಯಾಬ್ರಿಯಲ್ ಬೌಲಿಂಗೆ ವಿಕೆಟ್ ಒಪ್ಪಿಸಿದ್ದರು.
ಬಳಿಕ ಬಂದ ಶುಭ್ಮನ್ ಗಿಲ್ (29) ,ಇಶನ್ ಕಿಶನ್ (52) ರನ್ ಗಳಿಸಿ ಔಟಾಗದೇ ಉಳಿದರು. ಈ ವೇಳೆ ಮಳೆ ಬಂದು, ಪಂದ್ಯ ಸ್ಥಗಿತಗೊಂಡಿತ್ತು. ನಂತರ ಕೇವಲ ಮೂರು ಓವರ್ ಗಳನ್ನು ಆಡಿದ ಭಾರತವು 2 ವಿಕೆಟ್ ನಷ್ಟಕ್ಕೆ 181ರನ್ ಗಳಿಸಿ ಡಿಕ್ಲೇರ್ ಮಾಡಿತು.
ಭಾರತ ನೀಡಿದ 365 ರನ್ಗಳ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ಗೆ ಆರಂಭಿಕ ಆಘಾತ ಎದುರಾಯಿತು. ನಾಯಕ ಕ್ರೇಗ್ ಬ್ರಾಥ್ವೈಟ್ 28 ರನ್ ಗಳಿಸಿ ರವಿಚಂದ್ರನ್ ಅಶ್ವಿನ್ಅವರ ಉತ್ತಮ ಬೌಲಿಂಗೆ ವಿಕೆಟ್ ಒಪ್ಪಿಸಿದರೆ, ಬಳಿಕ ಬಂದ ಕ್ರೆಕ್ ಮೆಕ್ಕೆನ್ಜೀ ಖಾತೆ ತೆರೆಯದೇ ಅಶ್ವಿನ್ ಎಸೆತದಲ್ಲಿ ಎ.ಲ್.ಬಿ ಗೆ ವಿಕೆಟ್ ಒಪ್ಪಿಸಿದ್ದರು. ನಾಲ್ಕನೇ ದಿನದಂತ್ಯಕ್ಕೆ ಟಾಗೆನರೈನ್ ಚಂದ್ರಪಾಲ್ (24) ಮತ್ತು ಜೆರ್ಮೈನ್ ಬ್ಲಾಕ್ವುಡ್ (20) ಬ್ಯಾಟಿಂಗ್ ಕಾಯ್ದಕೊಂಡಿದ್ದಾರೆ. ವೆಸ್ಟ್ ಇಂಡೀಸ್ 2 ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿದ್ದು, ಬ್ಯಾಟಿಂಗ್ ಮುಂದುವರೆಸಿದ್ದು ವಿಂಡೀಸ್ ಗೆಲುವಿಗೆ ಇನ್ನೂ289 ರನ್ ಗಳು ಬೇಕು. ಭಾರತದ ಪರ ಅಶ್ವಿನ್ 2 ವಿಕೆಟ್ ಪಡೆದಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.