ಮನೆ ರಾಜ್ಯ ಬಿ.ಕೆ.ಹರಿಪ್ರಸಾದ್ ರನ್ನು ಪರಿಷತ್ ಸ್ಥಾನದಿಂದ ವಜಾ ಮಾಡಿ: ವರುಣ ಮಹೇಶ್ ಒತ್ತಾಯ

ಬಿ.ಕೆ.ಹರಿಪ್ರಸಾದ್ ರನ್ನು ಪರಿಷತ್ ಸ್ಥಾನದಿಂದ ವಜಾ ಮಾಡಿ: ವರುಣ ಮಹೇಶ್ ಒತ್ತಾಯ

0

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ‌ ಕೆ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ವಿಚಾರ ಇದೀಗ ಮೈಸೂರು ಭಾಗದ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

Join Our Whatsapp Group

ಬಿಕೆ ಹರಿಪ್ರಸಾದ್ ಅವರದ್ದು ದುರಂಹಕಾರದ ಹೇಳಿಕೆಯಾಗಿದ್ದು, ಅವರನ್ನು ಪರಿಷತ್ ಸ್ಥಾನದಿಂದ ವಜಾ ಮಾಡಿ ಎಂದು ಸಿದ್ದು ಅಭಿಮಾನಿ ಕೆಪಿಸಿಸಿ ಕಾರ್ಯದರ್ಶಿ ವರುಣ ಮಹೇಶ್ ಒತ್ತಾಯಿಸಿದ್ದಾರೆ.

ಈ ಕುರಿತು ವಿಡಿಯೋ ಮೂಲಕ ಒತ್ತಾಯಿಸಿರುವ ವರುಣ ಮಹೇಶ್, ಬಿ ಕೆ ಹರಿಪ್ರಸಾದ್ ಅವರಿಗೆ ನೋಟಿಸ್ ನೀಡಬೇಕು. ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಬಿ ಕೆ ಹರಿಪ್ರಸಾದ್ ಪಕ್ಷ‌ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಬೇಕು. ಸಿದ್ದರಾಮಯ್ಯ ವಿರುದ್ಧ ಅವಹೇಳನ ಸರಿಯಲ್ಲ. ಬಿ ಕೆ ಹರಿಪ್ರಸಾದ್ ಹೇಳಿಕೆ‌ ಖಂಡನೀಯ ಎಂದು ಹೇಳಿದ್ದಾರೆ.