ಪುಣೆ (ಮಹಾರಾಷ್ಟ್ರ): ಸಹಾಯಕ ಪೊಲೀಸ್ ಕಮಿಷನರ್ ರೊಬ್ಬರು (ಎಸಿಪಿ) ತನ್ನ ಪತ್ನಿ ಮತ್ತು ಸೋದರಳಿಯನನ್ನು ಗುಂಡು ಹಾರಿಸಿ ಹತ್ಯೆಗೈದು ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಪುಣೆ ನಗರದಲ್ಲಿ ನಡೆದಿದೆ.
ಪೊಲೀಸ್ ಸಹಾಯಕ ಕಮಿಷನರ್ ಭರತ್ ಗಾಯಕ್ವಾಡ್ (54), ಮೋನಿ ಗಾಯಕ್ವಾಡ್ (44) ಮತ್ತು ದೀಪಕ್ ಗಾಯಕ್ವಾಡ್ (35) ಮೃತರೆಂದು ಗುರುತಿಸಲಾಗಿದೆ.
ಭರತ್ ಗಾಯಕ್ವಾಡ್ ಅವರು ಅಮರಾವತಿ ಪೊಲೀಸ್ ಇಲಾಖೆಯಲ್ಲಿ ಸಹಾಯಕ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕುಟುಂಬ ಪುಣೆಯಲ್ಲಿ ನೆಲೆಸಿತ್ತು. ಭರತ್ ಗಾಯಕ್ವಾಡ್ ಅವರ ಕುಟುಂಬ ಪುಣೆಯ ಬಾಲೆವಾಡಿ ಪ್ರದೇಶದಲ್ಲಿ ವಾಸವಿತ್ತು. ಶನಿವಾರ ರಜೆಯ ಮೇಲೆ ಪುಣೆಗೆ ಆಗಮಿಸಿದ್ದರು ಎಂಬ ಮಾಹಿತಿ ದೊರೆತಿದೆ. ಇಂದು ಬೆಳಗಿನ ಜಾವ 3:30ರ ಹೊತ್ತಿಗೆ ಮೊದಲಿಗೆ ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳಿ ಪುತ್ರ ಹಾಗೂ ಸೋದರಳಿಯ ಓಡಿ ಬಂದಿದ್ದಾರೆ. ಕೋಣೆಯ ಬಾಗಿಲು ತೆರೆಯುತ್ತಿದ್ದಂತೆ ಸೋದರಳಿಯ ದೀಪಕ್ ಮೇಲೂ ಗುಂಡು ಹಾರಿಸಿದ್ದಾರೆ. ದೀಪಕ್ ಎದೆಗೆ ಗುಂಡು ತಗುಲಿದ್ದು ಅವರು ಸ್ಥಳದಲ್ಲೇ ಅಸುನೀಗಿದ್ದಾರೆ. ಇದಾದ ಬಳಿಕ ಗಾಯಕ್ವಾಡ್ ತಾನೂ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ.
ಪೊಲೀಸ್ ಅಧಿಕಾರಿ ತನ್ನ ಪತ್ನಿ ಮತ್ತು ಸೋದರಳಿಯನನ್ನು ಗುಂಡಿಕ್ಕಿ ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿರುವುದರ ಹಿಂದಿನ ಕಾರಣ ತಿಳಿದು ಬಂದಿಲ್ಲ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಚತುಃಶೃಂಗಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.