ಮನೆ ರಾಜ್ಯ ಗುಡ್ಡ ಕುಸಿತ: ಕುಕ್ಕೇ ಸುಬ್ರಮಣ್ಯ ರಸ್ತೆ ಬಂದ್…!

ಗುಡ್ಡ ಕುಸಿತ: ಕುಕ್ಕೇ ಸುಬ್ರಮಣ್ಯ ರಸ್ತೆ ಬಂದ್…!

0

ಹಾಸನ: ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಕಲೇಶಪುರ ತಾಲೂಕಿನ ಬಿಸಿಲೆ ಸಮೀಪದ ರಸ್ತೆಯೊಂದಕ್ಕೆ ಗುಡ್ಡದ ಮಣ್ಣು ಕುಸಿದು ಬಿದ್ದ ಪರಿಣಾಮ ಸುಬ್ರಮಣ್ಯ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.

Join Our Whatsapp Group

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ತಾಲೂಕಿನ ಬಿಸಿಲೆ ಸಮೀಪ ರಸ್ತೆಗೆ ಗುಡ್ಡ ಕುಸಿದು ಸಂಪರ್ಕ ಸ್ಥಗಿತವಾಗಿದೆ. ಇದರಿಂದ ಸುಬ್ರಮಣ್ಯಕ್ಕೆ ತೆರಳುವ ಪ್ರವಾಸಿಗರು ಸಂಕಷ್ಟಕ್ಕೀಡಾಗಿದ್ದಾರೆ.  ಅಲ್ಲದೇ  ಈ ಮಾರ್ಗದಲ್ಲಿ ಮರ ಬಿದ್ದು ಕೆಲ ಕಾಲ ಸಂಚಾರ ಸ್ಥಗಿತವಾಗಿತ್ತು. 

ಇದೀಗ ಗುಡ್ಡ ಕುಸಿದು ಮತ್ತೆ ಸಂಪರ್ಕ ಸ್ಥಗಿತವಾಗಿದೆ. ಮಳೆ ಆರ್ಭಟ ಹೆಚ್ಚಾಗಿರುವ ಹಿನ್ನಲೆ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.  ಹಾಗೆಯೇ ಭಾರೀ ಮಳೆಯಾಗುತ್ತಿರುವ  ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.