ಮನೆ ರಾಜ್ಯ ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷ, ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ತೀರ್ಮಾನ: ಹೆಚ್.ಡಿ ದೇವೇಗೌಡ...

ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷ, ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ತೀರ್ಮಾನ: ಹೆಚ್.ಡಿ ದೇವೇಗೌಡ ಸ್ಫೋಟಕ ಹೇಳಿಕೆ

0

ಬೆಂಗಳೂರು: ಸಿ.ಟಿ.ರವಿ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷರಾಗಲಿದ್ದಾರೆ. ಇನ್ನು ವಿಪಕ್ಷ ನಾಯಕರಾಗಿ ಬಸನಗೌಡ ಪಾಟೀಲ್ ಯತ್ನಾಳ್ ಎಂದು ಬಹುತೇಕ ತೀರ್ಮಾನವಾಗಿದೆ ಎಂದು ಜೆಡಿಎಸ್ ವರಿಷ್ಠ ಹೆಚ್ ​ಡಿ ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

Join Our Whatsapp Group

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ  ಅವರು, ವಿರೋಧ ಪಕ್ಷದ ನಾಯಕ ಹಾಗೂ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗುವ ಹೆಸರುಗಳು ಘೋಷಣೆ ಮಾಡಿದ್ದಾರೆ. 

ನಾವು ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ. ಅದರಲ್ಲಿ ಬಿಜೆಪಿ ಜೊತೆ ನಮ್ಮ ಜಂಟಿ ಹೋರಾಟ ಹೇಗೆ ಆಗುತ್ತದೆ ಎಂದು ಹೇಳುವ ಮೂಲಕ ಬಿಜೆಪಿಯೊಂದಿಗೆ ಮೈತ್ರಿ ಎಲ್ಲ ಎಂದು ಸ್ಪಷ್ಟಪಡಿಸಿದರು.

ಇದರೊಂದಿಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ಅಂತೆ-ಕಂತೆಗಳ ಚರ್ಚೆಗಳಿಗೆ ದೇವೇಗೌಡ ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ಗೊಂದಲಿಗೆ ತೆರೆ ಎಳೆದಿದ್ದು, ಮುಂದಿನ ಲೋಕಸಭೆ ಚುನಾವಣೆ ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ​ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ.