ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗುತ್ತಿದೆ.
ಸಿಸಿಬಿ ಪೊಲೀಸರು ಇಂದು ಶಂಕಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಮತ್ತೆ 7 ದಿನಗಳ ಕಾಲ ವಶಕ್ಕೆ ಪಡೆಯಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಏಳು ದಿನಗಳ ಕಾಲ ತೀವ್ರ ವಿಚಾರಣೆ ನಡೆದಿದ್ದು, ವಿಚಾರಣೆಯಲ್ಲಿ ಹಲವು ಸ್ಪೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮತ್ತೊಂದೆಡೆ, ತಲೆಮರೆಸಿಕೊಂಡಿರುವ ಜುನೈದ್ ಹಾಗೂ ಗ್ರೆನೇಡ್ ತಂದುಕೊಟ್ಟ ವ್ಯಕ್ತಿಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ. ಇನ್ನೂ ಕೆಲವರು ಶಂಕಿತರ ಜೊತೆ ಸಂಪರ್ಕದ ಶಂಕೆ ಇದ್ದು ಮತ್ತೆ ಏಳು ದಿನಗಳ ಕಾಲ ಕಸ್ಟಡಿಗೆ ಕೇಳಲು ಸಿಸಿಬಿ ಸಿದ್ದತೆ ನಡೆಸುತ್ತಿದೆ. ಪ್ರಕರಣದ ಎ1 ಆರೋಪಿ ಉಗ್ರ ಟಿ.ನಜೀರ್ನನ್ನು ಕಸ್ಟಡಿಗೆ ಪಡೆಯಲು ಸಿಸಿಬಿ ಕಾರ್ಯಪ್ರವೃತ್ತವಾಗಿದ್ದು, ಜೈಲಿನಲ್ಲಿರುವ ಉಗ್ರ ನಜೀರ್ನ ವಿಚಾರಣೆ ನಡೆಸಿದರೆ ಮತ್ತಷ್ಟು ಅಂಶಗಳು ಹೊರಬೀಳಲಿವೆ.
ಪ್ರಕರಣದ ಎರಡನೇ ಆರೋಪಿ ಜುನೈದ್ಗೆ ಉಗ್ರ ಚಟುವಟಿಕೆ ನಡೆಸುವಂತೆ ಬ್ರೈನ್ವಾಶ್ ಮಾಡಿದ್ದ ನಜೀರ್ 2008ರ ಸರಣಿ ಬಾಂಬ್ ಸ್ಪೋಟದ ಆರೋಪಿಯಾಗಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.