ನೀವು ಯಾವುದೇ ಚಿತ್ರಮಂದಿರಕ್ಕೆ ಹೋದರೂ, ಚಿತ್ರ ಪ್ರಾರಂಭಕ್ಕೆ ಮೊದಲು ಬರುವ ಜಾಹೀರಾತಿನಲ್ಲಿ ಕೇಳುವ ಪದವೇ “ಈ ಪಟ್ಟಣಕ್ಕೆ ಏನಾಗಿದೆ? ಈಗ ಇದೇ ಪದ ಚಿತ್ರದ ಶೀರ್ಷಿಕೆಯಾಗಿದೆ. ಈ ಚಿತ್ರ ರವಿತೇಜೊ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದ್ದು, ಬಿಡುಗಡೆಗೂ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಟೀಸರ್ ಮೂಲಕ ಚಿತ್ರದ ಕುರಿತು ಐದು ಗ್ಯಾರೆಂಟಿಗಳನ್ನು ಪ್ರೇಕ್ಷಕರಿಗೆ ನೀಡುವುದಾಗಿ ನಿರ್ದೇಶಕ ರವಿ ಸುಬ್ಬರಾವ್ ತಿಳಿಸಿದ್ದಾರೆ.
ಜೂಜು ಮತ್ತು ಬೆಟ್ಟಿಂಗ್ ಮಾಫಿಯಾದ ಸುತ್ತ ಹೆಣೆಯಲಾಗಿರುವ ಈ ಚಿತ್ರದಲ್ಲಿ ನಾಯಕ ತನ್ನ ವಿಲಾಸ ಜೀವನಕ್ಕಾಗಿ ಹೇಗೆ ಅನೇಕರನ್ನು ತನ್ನ ಮೋಸದ ಜಾಲಕ್ಕೆ ಬೀಳಿಸಿಕೊಂಡು ಉನ್ನತ ಸ್ಥಾನಕ್ಕೆ ಏರುತ್ತಾನೆ ಎನ್ನುವುದರೊಂದಿಗೆ ಕ್ರಿಕೆಟ್ ಬೆಟ್ಟಿಂಗ್ ಜಾಲವನ್ನು ಕೂಡ ಕುತೂಹಲ ಭರಿತವಾಗಿ ತೋರಿಸಲಾಗಿದೆ ಯಂತೆ.
ಈ ಚಿತ್ರಕ್ಕೆ ರವಿ ಸುಬ್ಬ ರಾವ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಹಾಗೂ ನಿರ್ದೇಶನ ಮಾಡಿರುವುದಲ್ಲದೆ, ನಾಯಕನಾಗಿಯೂ ಅಭಿನಯಿಸಿದ್ದಾರೆ. ರಾಧಿಕಾರಾಮ್ ಈ ಚಿತ್ರದ ನಾಯಕಿ. ರಿತೇಶ್ ಜೋಶಿ, ಶ್ರೀನಿಧಿ, ಸತೀಶ್ ಶೆಟ್ಟಿ, ಸೋನಾ, ದಿಶಾ , ಸಂಧ್ಯಾ ವೇಣು, ಬಲರಾಮ್ , ಸುಕನ್ಯಾ, ಗೋಪಾಲ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
ರಿತೇಶ್ ಜೋಶಿ ಮತ್ತು ರವಿ ಸುಬ್ಬ ರಾವ್ ನಿರ್ಮಿಸಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ ಸಂಗೀತ ನೀಡಿದ್ದಾರೆ. ಈ ಪಟ್ಟಣಕ್ಕೆ ಏನಾಗಿದೆ? ಚಿತ್ರ 2 ಭಾಗಗಳಲ್ಲಿ ಬರುತ್ತಿದ್ದು, ಮೊದಲನೇ ಭಾಗ ತೆರೆಗೆ ಬರಲು ಸಿದ್ಧವಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.