‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಅವರು ಒಟ್ಟಾಗಿ ನಟಿಸಿದ್ದಾರೆ. ಹಲವು ವರ್ಷಗಳ ಬಳಿಕ ಕರಣ್ ಜೋಹರ್ ಅವರು ನಿರ್ದೇಶನಕ್ಕೆ ಇಳಿದಿದ್ದಾರೆ. ಈ ಚಿತ್ರ ನೋಡಿದವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ.
ಕರಣ್ ಜೋಹರ್ ಅವರು ಅದ್ದೂರಿ ಸಿನಿಮಾಗಳನ್ನು ನಿರ್ಮಾಣ ಮಾಡುವುದರಲ್ಲಿ ಎತ್ತಿದ ಕೈ. ಅವರ ಧರ್ಮ ಪ್ರೊಡಕ್ಷನ್ ನಿಂದ ಹಲವು ಸೂಪರ್ ಹಿಟ್ ಚಿತ್ರಗಳು ಬಂದಿವೆ. ಈಗ ಅವರದ್ದೇ ನಿರ್ದೇಶನ ಹಾಗೂ ನಿರ್ಮಾಣ ಇರುವುದರಿಂದ ಅವರು ಮತ್ತಷ್ಟು ಅದ್ದೂರಿಯಾಗಿ ಸಿನಿಮಾ ಮಾಡಿದ್ದಾರೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಟ್ರೇಲರ್ ನೋಡಿದವರಿಗೆ ಇದು ಮನವರಿಕೆ ಆಗಿತ್ತು. ಹೀಗಾಗಿ, ಅನೇಕರು ಹೋಗಿ ಸಿನಿಮಾ ನೋಡಿದ್ದಾರೆ.
‘ದೊಡ್ಡ ಪರದೆಯಲ್ಲಿ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾ ನೋಡೋಕೆ ಥ್ರಿಲ್ ಆಗಿದೆ. ಸಿನಿಮಾ ನಿಜಕ್ಕೂ ಅದ್ಭುತವಾಗಿದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.
‘ಈ ಸಿನಿಮಾ ಚೆನ್ನಾಗಿದೆ. ಆದರೆ, ಒಂದು ಹಾಡನ್ನು ಹೊರತುಪಡಿಸಿ ಮತ್ತಾವುದೇ ಒಳ್ಳೆಯ ಹಾಡು ಇದರಲ್ಲಿ ಇಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಇದೊಂದು ಟಿಪಿಕಲ್ ಬಾಲಿವುಡ್ ಸಿನಿಮಾ ಎಂದು ಕರೆದಿದ್ದಾರೆ.
ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಅವರು ‘ಗಲ್ಲಿ ಬಾಯ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಆ ಬಳಿಕ ಇವರು ಒಟ್ಟಾಗಿ ನಟಿಸಿದ ಸಿನಿಮಾ ಇದು ಎಂಬ ಕಾರಣಕ್ಕೂ ನಿರೀಕ್ಷೆ ಸೃಷ್ಟಿ ಆಗಿತ್ತು. ಇವರ ಕೆಮಿಸ್ಟ್ರಿ ಅನೇಕರಿಗೆ ಇಷ್ಟ ಆಗಿದೆ. ಈ ಸಿನಿಮಾ ಮೊದಲ ದಿನ ಎಷ್ಟು ಗಳಿಕೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.