ರಾಜ್ಯ ಸರ್ಕಾರದಿಂದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಿ ವೃಂದದ ಕಲ್ಯಾಣ ಸಂಘಟಕರ ಹುದ್ದೆ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 2 ಆಗಸ್ಟ್ ಆಗಿದೆ.
ಹುದ್ದೆ: ಕರ್ನಾಟಕ ಸೈನಿಕ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14 ಕಲ್ಯಾಣ ಸಂಘಟಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಅದಕ್ಕೆ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಥವಾ 10ನೇ ತರಗತಿ ಉತ್ತೀರ್ಣರಾಗಿ ಸಶಸ್ತ್ರ ಪಡೆಯಲ್ಲಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ, ಸಶಸ್ತ್ರ ಪಡೆಗಳಲ್ಲಿ ಭಾರತೀಯ ಸೇನೆ, ನೌಕಾ ಪಡೆ, ವಾಯು ಸೇನೆಯಿಂದ ಸ್ಪೆಷನ್ ಸರ್ಟಿಫಿಕೆಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ಪದವಿ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳು ಮೀರಿರಬಾರದು
ನೇಮಕಾತಿ ವಿಧಾನ: ಕನ್ನಡ ಭಾಷೆ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಸ್ಮರ್ಧಾತ್ಮಕ ಪರೀಕ್ಷೆಯಲ್ಲಿ ಎರಡು ಪತ್ರಿಕೆ ಇರಲಿದ್ದು, ಬಹು ನಿಷ್ಟ ಆಯ್ಕೆ ಮಾದರಿಯಲ್ಲಿ ಈ ಪತ್ರಿಕೆ ಇರಲಿದೆ. ಮೊದಲ ಪತ್ರಿಕೆ ಸಾಮಾನ್ಯ ಜ್ಞಾನವಾಗಿದ್ದು, ಎರಡನೇ ಪತ್ರಿಕೆ ಸಾಮಾನ್ಯ ಕನ್ನಡ, ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಲಿದೆ.
ವೇತನ: ಈ ಹುದ್ದೆಗಳಿಗೆ 21400 ರೂ ನಿಂದ 42000ರೂ.ವರೆಗೆ ವೇತನ ನಿಗದಿ ಪಡಿಸಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರ, ಹುದ್ದೆ ಸಲ್ಲಿಕೆ ಪ್ರಮಾಣಪತ್ರ ಸೇರಿದಂತೆ ಇನ್ನಿತರ ಅಗತ್ಯ ಮಾಹಿತಿಯನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
![](https://savaltv.com/wp-content/uploads/2023/07/sainink_2907newsroom_1690611113_282.jpg)
ವಿಶೇಷ ಸೂಚನೆ: ಈ ಹುದ್ದೆಗೆ ಈಗಾಗಲೇ ಭೂ, ವಾಯು ಅಥವಾ ನೌಕ ಸೇನೆಯಲ್ಲಿ ಕೆಲಸ ನಿರ್ವಹಿಸಿ, ಹುದ್ದೆಯಿಂದ ಬಿಡುಗಡೆಗೊಂಡಿರುವ ಮಾಜಿ ನೌಕರರು ಹುದ್ದೆ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಕೆ ವಿಳಾಸ: ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಒಲಾಖೆ, ನಂ 58, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು 560025.ಜುಲೈ 13ರಂದು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 2 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು sainikwelfare.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.