ಬೆಂಗಳೂರು: ಬಿಎಂಟಿಸಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ ಅಕ್ರಮ ನಡೆಸಿದ್ದು, ಬಿಎಂಟಿಸಿ ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ 79 ಲಕ್ಷ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಎಂಟಿಸಿ ಸಹಾಯಕ ಭದ್ರತಾ-ಜಾಗೃತಾಧಿಕಾರಿ ಸಿ.ಕೆ.ರಮ್ಯಾರವರು ದೂರು ದಾಖಲಿಸಿದ್ದಾರೆ.
ಬೆಂಗಳೂರಿನ ವಿಲ್ಸನ್ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಬಿಎಂಟಿಸಿ ವಾಣಿಜ್ಯ ವಿಭಾಗದ ಮುಖ್ಯ ಸಂಚಾರಕ ಸೇರಿದಂತೆ 6 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಬಿಎಂಟಿಸಿಯ ಟೆಂಡರ್ ಗಳ ನೀಡಿಕೆ, ಫ್ಲ್ಯಾಟ್ ಗಳು ಮತ್ತು ವಾಣಿಜ್ಯ ಮಳಿಗೆಗಳ ಹಂಚಿಕೆ, ಟೆಂಡರ್ ಅವಧಿ ವಿಸ್ತರಣೆಗೆ ಸಂಬಂಧಪಟ್ಟ ಕಡತಗಳಿಗೆ ಬಿಎಂಟಿಸಿ ಎಂಡಿ, ನಿರ್ದೇಶಕರ ಹೆಸರಿನಲ್ಲಿ ನಕಲು ಸಹಿ ಮಾಡಿ ಸಂಸ್ಥೆಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಿಎಂಟಿಸಿ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಸೂರ್ಯಸೇನ್, ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ರೇಜು, ಸಿ. ಶಿಖಾ, ಭದ್ರತಾ ಮತ್ತು ಜಾಗೃತಿ ವಿಭಾಗದ ನಿರ್ದೇಶಕ ಕೆ ಅರುಣ ಸಹಿ ನಕಲು ಮಾಡಲಾಗಿದೆ.
ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕ ಶ್ರೀರಾಮ ಮುಲ್ಕಾವನ್, ವಿಭಾಗೀಯ ಸಂಚಾರ ಅಧಿಕಾರಿ ಶ್ಯಾಮಲಾ ಎಸ್ ಮುದ್ದೋಡಿ, ಸಹಾಯಕ ಸಂಚಾರ ವ್ಯವಸ್ಥಾಪಕಿ ಬಿ.ಕೆ.ಮಮತ, ಸಹಾಯಕ ಸಂಚಾರ ಅಧೀಕ್ಷಕಿ ಟಿ ಅನಿತಾ, ಸಂಚಾರ ನೀರೀಕ್ಷಕ ಸತೀಶ್, ಕಿರಿಯ ಸಹಾಯಕ ಪ್ರಕಾಶ್ ಕೊಪ್ಪಳ ವಿರುದ್ಧ ಪ್ರಕರಣ ದಾಖಲಾಗಿದೆ.
ಕಳೆದ ಮೂರು ವರ್ಷಗಳಿಂದ ನಿಗಮದ ಕೆಲ ಬಸ್ ನಿಲ್ದಾಣಗಳ ವಾಣಿಜ್ಯ ಸಂಕೀರ್ಣ, ಸ್ವಚ್ಛತಾ ನಿರ್ವಹವಣಾ ಗುತ್ತಿಗೆ ಸೇರಿ 4 ಟೆಂಡರ್ಗಳಲ್ಲಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ ಅವ್ಯವಹಾರ ನಡೆಸಿದ್ದಾರೆ. ದಾಖಲೆಗಳಲ್ಲಿ ಬಿಎಂಟಿಸಿ ಅಧಿಕಾರಿಗಳ ಸಹಿ ನಕಲು ಮಾಡಿ ಬಿಎಂಟಿಸಿ ನಿಗಮಕ್ಕೆ 76.57 ಲಕ್ಷ ವಂಚಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
ಬಿಎಂಟಿಸಿ ಬಸ್ ನಿಲ್ದಾಣಗಳ ಆವರಣದಲ್ಲಿ ಜಾಹೀರಾತು ನೀಡಿಕೆ, ಬ್ಯಾಂಕ್ ಎಟಿಎಂ ಘಟಕಗಳ ಜಾಗದ ಪರವಾನಗಿ ಅವಧಿ ವಿಸ್ತರಣೆ, ಬಿಎಂಟಿಸಿಯ ಫ್ಲ್ಯಾಟ್ ಗಳ ಹಂಚಿಕೆಗೆ ಸಂಬಂಧಪಟ್ಟ ಕಡತಗಳಿಗೆ ತಪ್ಪಿತಸ್ಥ ಅಧಿಕಾರಿಗಳು ಸಂಸ್ಥೆಯ ಹಾಲಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ, ಹಿಂದಿನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಭದ್ರತೆ ಮತ್ತು ಜಾಗೃತ ದಳದ ನಿರ್ದೇಶಕರ ಹೆಸರಿನಲ್ಲಿ ನಕಲಿ ಸಹಿ ಮಾಡಿ ವಂಚಿಸಿದ್ದಾರೆ. ಇದರಿಂದ ಸಂಸ್ಥೆಗೆ ಸಾಕಷ್ಟು ವಂಚನೆಯಾಗಿದೆ. ಅಧಿಕಾರಿಗಳ ಅಕ್ರಮವು ಈಗಾಗಲೇ ಇಲಾಖಾ ತನಿಖೆಯಲ್ಲಿ ದೃಢಪಟ್ಟಿದೆ ಎಂದು ರಮ್ಯಾ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.