ಮನೆ ರಾಜ್ಯ ಬೆಂಗಳೂರು: ನವದಂಪತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ನವದಂಪತಿ ಆತ್ಮಹತ್ಯೆಗೆ ಶರಣು

0

ಬೆಂಗಳೂರು: ಕೇವಲ ಮೂರು ತಿಂಗಳು ಹಿಂದಷ್ಟೇ ಮದುವೆಯಾಗಿದ್ದ ನವದಂಪತಿ ಜೋಡಿಯೊಂದು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.               

Join Our Whatsapp Group

ವಿಜಯಪುರ ಪಟ್ಟಣದ ನಿವಾಸಿಗಳಾದ ರಮೇಶ್ (28 ̧)̧̧̧̧  ಸಹನ (26) ಆತ್ಮಹತ್ಯೆಗೆ ಶರಣಾದ ನವದಂಪತಿಗಳಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬಿಜ್ಜವರ ಗ್ರಾಮದ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಶರಣಾದ ಜೋಡಿ ಮನೆಯವರ ವಿರೋಧದ ನಡುವೆಯೇ ಪ್ರೀತಿಸಿ ಮೂರು ತಿಂಗಳಿಂದಷ್ಟೇ ಮದುವೆಯಾಗಿ ಬಾಡಿಗೆ ಮನೆಯಲ್ಲಿ ಸಂಸಾರ ನಡೆಸುತ್ತಿದ್ದರು. ಎರಡು ದಿನದ ಹಿಂದೆ ಬಿಜ್ಜವರ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ದಂಪತಿ, ಆದರೆ ರಾತ್ರಿ ಮನೆಯಿಂದ ಹೊರಟವರು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.   

ನವದಂಪತಿಗಳ ಆತ್ಮಹತ್ಯೆಗೆ ನಿಖರ ಕಾರಣ ತಿಳಿದ ಬಂದಿಲ್ಲ.ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ನೀರಿನಲ್ಲಿದ್ದ ಮೃತ ದೇಹಗಳನ್ನು ಹೊರ ತೆಗೆದು ತನಿಖೆ ನಡೆಸಿದ್ದಾರೆ.