ಮನೆ ಅಪರಾಧ ಮಂಡ್ಯ: ಪತಿಯಿಂದಲೇ ಪತ್ನಿಯ ಹತ್ಯೆ

ಮಂಡ್ಯ: ಪತಿಯಿಂದಲೇ ಪತ್ನಿಯ ಹತ್ಯೆ

0

ಮಂಡ್ಯ: ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿ ಪತಿ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹುಲ್ಕೆರೆ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಸೌಮ್ಯ (24) ಕೊಲೆಯಾದ ಮೃತ ದುರ್ದೈವಿ. ಪತಿ ಗಣೇಶ್ (33) ಕೊಲೆ ಮಾಡಿ ಪರಾರಿಯಾದ ಪತಿ.

ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಸೌಮ್ಯ, ಕಳೆದ ಎಂಟು ವರ್ಷಗಳ ಹಿಂದೆ ಗಣೇಶ್ ಜೊತೆ ಮದುವೆಯಾಗಿತ್ತು.

ದಂಪತಿಗೆ ಏಳು ವರ್ಷದ ಗಂಡು ಮಗು ಇದೆ.  

ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಪತಿ ಗಣೇಶ ಪರಾರಿಯಾಗಿದ್ದು, ಅಕ್ಕಪಕ್ಕದವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಪಾಂಡವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.