ಮನೆ ರಾಜ್ಯ ಹಳೆ ದ್ವೇಷಕ್ಕೆ ಟೊಮೆಟೊ ಬೆಳೆ ನಾಶ: ಮುಗಿಲು ಮುಟ್ಟಿದ ರೈತನ ಆಕ್ರಂದನ

ಹಳೆ ದ್ವೇಷಕ್ಕೆ ಟೊಮೆಟೊ ಬೆಳೆ ನಾಶ: ಮುಗಿಲು ಮುಟ್ಟಿದ ರೈತನ ಆಕ್ರಂದನ

0

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ ಹಳೆ ವೈಶಮ್ಯ ಹಿನ್ನಲೆ ತೋಟಕ್ಕೆ ನುಗ್ಗಿ ಟೊಮೆಟೊ ಬೆಳೆಯನ್ನು ಕಿಡಿಗೇಡಿಗಳು ನಾಶಪಡಿಸಿದ್ದು, ರೈತನ ಆಕ್ರಂದನ ಮುಗಿಲುಮುಟ್ಟಿದೆ.

Join Our Whatsapp Group

ಗ್ರಾಮದ ಮಂಜು ಎಂಬುವವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ ಬೆಳೆಯನ್ನು ರಾತ್ರೋ ರಾತ್ರಿ ತೋಟಕ್ಕೆ ನುಗ್ಗಿ ದುಷ್ಕರ್ಮಿಗಳು ಕಿತ್ತು ಹಾಕಿದ ಘಟನೆ ನಡೆದಿದೆ.

ಈಗಾಗಲೇ ಮಾರುಕಟ್ಟೆಯಲ್ಲಿ ಕೆ.ಜಿ ಟೊಮೆಟೊಗೆ ಶತಕ ದಾಟಿದೆ. ಈ ವೇಳೆ ಕಷ್ಟಪಟ್ಟು ಬೆಳೆದ ಟೊಮೆಟೊ ನಾಶವಾದ ಸುದ್ದಿ ತಿಳಿದ ಮಾಲೀಕರು ಜಮೀನಿನಲ್ಲಿ ಮಲಗಿ ಹೊರಳಾಡಿ ಕಣ್ಣೀರು‌ ಹಾಕಿದ್ದಾರೆ.

ಕಷ್ಟಪಟ್ಟು ಬೆಳೆದಿದ್ದ ಟೊಮ್ಯಾಟೊ ಗಿಡವನ್ನು ಬುಡಸಮೇತ ಕತ್ತರಿಸಿ ಹಾಕಿದ್ದಾರೆ. ಈ ಹಿನ್ನಲೆ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊ ನಾಶವಾಗಿದ್ದು, ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.