ತರೌಬಾ (ಟ್ರಿನಿಡಾಡ್ ಮತ್ತು ಟೊಬಾಗೊ): ಬ್ರಿಯಾನ್ ಲಾರಾ ಮೈದಾನದಲ್ಲಿ ಗುರುವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ರನ್ ಗಳಿಂದ ವಿಂಡೀಸ್ ಎದುರು ಸೋತಿದೆ.
5 ಪಂದ್ಯಗಳ ಸರಣಿಯಲ್ಲಿ ಕೆರಿಬಿಯನ್ನರು 1-0 ಮುನ್ನಡೆ ಸಾಧಿಸಿದ್ದಾರೆ.
ಟಾಸ್ ಗೆದ್ದು ಬ್ಯಾಟಿಂಗ್ ಳಿದ ವೆಸ್ಟ್ ಇಂಡೀಸ್ ಉತ್ತಮ ಆರಂಭ ಪಡೆದು ಕೊಳ್ಳಲಿಲ್ಲ ಸ್ಪಿನ್ನರ್ ಯುಜುವೇಂದ್ರ ಚಹಲ್ ತಮ್ಮ ಮೊದಲ ಎಸೆತದಲ್ಲೇ ಆಘಾತ ನೀಡಿದರು. 6 ಎಸೆತಗಳಲ್ಲಿ ಕೇವಲ 1 ರನ್ ಗಳಿಸಿದ್ದ ಕೈಲ್ ಮೇಯರ್ಸ್ ಅವರನ್ನು ಎಲ್ಬಿಡಬ್ಲ್ಯೂ ಬಲೆಗೆ ಬೀಳಿಸಿದರು. ನಂತರ ಓವರ್ ನ ಮೂರನೇ ಬಾಲ್ ನಲ್ಲಿ ಮತ್ತೋರ್ವ ಆರಂಭಿಕ ಬ್ಯಾಟರ್ ಬ್ರಾಂಡನ್ ಕಿಂಗ್ (28 ರನ್) ಅವರನ್ನೂ ಕೂಡ ಚಹಲ್ ಔಟ್ ಮಾಡಿದರು .
ಬಳಿಕ ಬಂದ ನಿಕೋಲಸ್ ಪೂರನ್ ಅಬ್ಬರದ ಬ್ಯಾಟಿಂಗ್ ಮಾಡಿದರು. ಮೊದಲ ಎಸೆತದಿಂದಲೇ ಬೌಂಡರಿ ಮೂಲಕ ಖಾತೆ ತೆರೆದ ಪೂರನ್ ಕೆಲ ಆಕರ್ಷಕ ಹೊಡೆತಗಳನ್ನು ಬಾರಿಸಿದರು. 34 ಎಸೆತಗಳಲ್ಲಿ 41 ರನ್ ಗಳಿಸಿ ಸಿಕ್ಸರ್ ಸಿಡಿಸುವ ಯತ್ನದಲ್ಲಿ ತಿಲಕ್ ವರ್ಮಾಗೆ ಕ್ಯಾಚ್ ನೀಡಿದರು. ಇನ್ನೊಂದೆಡೆ ನಾಯಕನ ಆಟವಾಡಿದ ರೊವ್ಮನ್ ಪೊವೆಲ್ 32 ಎಸೆತಗಳಲ್ಲಿ 48 ರನ್ ಸಿಡಿಸಿ, ಕೇವಲ 2 ರನ್ಗಳಿಂದ ಅರ್ಧಶತಕದಿಂದ ವಂಚಿತರಾದರು.
ಹೇಟ್ಮೇರ್ 10 ಹಾಗೂ ರೊಮಾರಿಯೋ ಶೆಫರ್ಡ್ 4 ಹಾಗೂ ಜೇಸನ್ ಹೋಲ್ಡರ್ 6 ರನ್ ಗಳಿಸಿ ಅಜೇಯರಾಗುಳಿದರು. ವಿಂಡೀಸ್ 6 ವಿಕೆಟ್ ಕಳೆದುಕೊಂಡು 149 ರನ್ ಗಳಿಸಿತ್ತು . ಭಾರತದ ಪರ ಅರ್ಷದೀಪ್ ಹಾಗೂ ಚಹಲ್ ತಲಾ ಎರಡು ಮತ್ತು ಹಾರ್ದಿಕ್, ಕುಲದೀಪ್ ಒಂದೊಂದು ವಿಕೆಟ್ ಪೆಡೆದು .
150 ರನ್ ಗಳ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೂ ಉತ್ತಮ ಆರಂಭ ಸಿಗಲಿಲ್ಲ . ತಂಡದ ಮೊತ್ತ 5 ರನ್ ಳಾಗಿದ್ದಾಗಲೇ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ರನ್ನು ಕೇವಲ 3 ರನ್ ಗೆ ಅಕೇಲ್ ಹೊಸೈನ್ ಎಸೆತದಲ್ಲಿ ನಿಕೋಲಸ್ ಪೂರನ್ ಸ್ಟಂಪ್ ಔಟ್ ಮಾಡಿದರು. ಬಳಿಕ ಬಂದ ಸೂರ್ಯಕುಮಾರ್ ಯಾದವ್ ಅವರು ಅಕೇಲ್ ಮತ್ತು ಅಲ್ಜಾರಿ ಜೋಸೆಫ್ ಬೌಲಿಂಗ್ ನಲ್ಲಿ ಅದ್ಭುತ ಹೊಡೆತಗಳ ಮೂಲಕ ಬೌಂಡರಿ, ಸಿಕ್ಸರ್ ಸಿಡಿಸಿದರು. ಆದರೆ, ಇದೇ ವೇಳೆ 9 ಎಸೆತಗಳಲ್ಲಿ 6 ರನ್ ಗಳಿಸಿದ್ದ ಇಶಾನ್ ಕಿಶನ್ ಒಬೆಡ್ ಮೆಕಾಯ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು.
ಯುವ ಬ್ಯಾಟರ್ ತಿಲಕ್ ವರ್ಮಾ ಮಿಂಚಿನ ಬ್ಯಾಟಿಂಗ್ ನಡೆಸಿದರು. ಸೂರ್ಯಕುಮಾರ್ ಜೊತೆಗೂಡಿ 39 ರನ್ (2 ಬೌಂಡರಿ, 3 ಸಿಕ್ಸರ್) ಜೊತೆಯಾಟವಾಡಿದರು. ತಂಡದ ಮೊತ್ತ 67 ರನ್ ಆಗಿದ್ದಾಗ 21 ರನ್ ಗಳಿಸಿದ್ದ ಸೂರ್ಯಕುಮಾರ್ ಹೋಲ್ಡರ್ ಎಸೆತದಲ್ಲಿ ಔಟಾದರು. ಇದರ ಬೆನ್ನಲ್ಲೇ ತಿಲಕ್ ವರ್ಮಾ ಕೂಡ ಔಟಾದರು.
ನಾಯಕ ಹಾರ್ದಿಕ್ ಪಾಂಡ್ಯ 19, ಸಂಜು ಸ್ಯಾಮ್ಸನ್ 12 ಹಾಗೂ ಅಕ್ಷರ್ ಪಟೇಲ್ 13 ರನ್ ಗಳಿಸಿದ್ದು, ತಂಡದ ಮೊತ್ತದ ವೇಗ ಹೆಚ್ಚಿಸುವಲ್ಲಿ ವಿಫಲರಾದರು. ಕೊನೆಯ ಎರಡು ಓವರ್ ಗಳಲ್ಲಿ ಭಾರತದ ಗೆಲುವಿಗೆ 21 ರನ್ ಅಗತ್ಯವಿತ್ತು. 19ನೇ ಓವರ್ನಲ್ಲಿ ಅರ್ಷದೀಪ್ (12 ರನ್) 2 ಬೌಂಡರಿ ಬಾರಿಸಿದರು. ಅಂತಿಮ ಓವರ್ ನಲ್ಲಿ ಜಯ ಸಾಧಿಸಲು 10 ರನ್ ಬೇಕಿದ್ದಾಗ ಕೇವಲ 5 ರನ್ ಗಳಿಸಲಷ್ಟೇ ಶಕ್ತವಾದ ಟೀಂ ಇಂಡಿಯಾ 4 ರನ್ ಅಂತರದ ಸೋಲು ಕಂಡಿತು.
ಈ ಗೆಲುವಿನ ಮೂಲಕ ವೆಸ್ಟ್ ಇಂಡೀಸ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.