ಮಂಡ್ಯ: ಸರಗಳ್ಳರು ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದು, ಒಬ್ಬಂಟಿಯಾಗಿ ಓಡಾಡುವ ಮಹಿಳೆಯರೇ ಎಚ್ಚರವಹಿಸಿ ಎಂದು ಮಂಡ್ಯ ಎಸ್ಪಿ ಎನ್.ಯತೀಶ್ ಮನವಿ ಮಾಡಿದ್ದಾರೆ.
ಸಕ್ಕರೆನಾಡು ಮಂಡ್ಯದಲ್ಲಿ ಸರಗಳ್ಳರ ತಂಡ ಕ್ರಿಯಾಶೀಲಾಗಿದ್ದು, ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಟಾರ್ಗೆಟ್ ಮಾಡ್ತಿದ್ದಾರೆ.
ಒಂದೇ ದಿನ ಎರಡು ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆದಿದ್ದ ಕಾರಣದಿಂದಾಗಿ ಬೆಸಗರಹಳ್ಳಿ ಪೊಲೀಸರು ಒಂಟಿಯಾಗಿ ಮಹಿಳೆಯರು ಓಡಾಡದಂತೆ ಪ್ರಕಟಣೆ ಹೊರಡಿಸಿದ್ದಾರೆ.
ಜಮೀನು, ಕಾಲುವೆಗೆ ಹೋಗುವ ಹಾಗೂ ದಾನ ಮೇಯಿಸುವ, ವಾಯುವಿಹಾರಕ್ಕೆ ಹೋಗುವ ಮಹಿಳೆಯರೇ ಸರಗಳ್ಳರ ಟಾರ್ಗೆಟ್ ಆಗಿದ್ದು, ಬೈಕ್ ನಲ್ಲಿ ಬಂದು ಕ್ಷಣಾರ್ಧದಲ್ಲಿ ಸರ ಕಿತ್ತುಕೊಂಡು ಪರಾರಿಯಾಗುತ್ತಾರೆ.
ಚಾಕು ತೋರಿಸಿ ಮಾಂಗಲ್ಯ ಸರ ಎಗರಿಸಿದ ಕಳ್ಳರು
ಮದ್ದೂರು ತಾಲ್ಲೂಕಿನ ರಾಂಪುರ ಗ್ರಾಮದ ಸುಧಾ ಎಂಬ ಮಹಿಳೆ ಜಮೀನಿನಲ್ಲಿ ಬಳಿ ಬಟ್ಟೆ ಒಗೆಯುವ ವೇಳೆ ಚಾಕು ತೋರಿಸಿ ಮಾಂಗಲ್ಯ ಸರ ಎಗರಿಸಿದ್ದ ಹಿನ್ನಲೆ ಮಂಡ್ಯ ಎಸ್ಪಿ ಎನ್.ಯತೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಿಳೆಯಿಂದ ಘಟನೆಯ ಮಾಹಿತಿಯನ್ನು ಪಡೆದಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಅನುಮಾನಸ್ಪದವಾಗಿ ಯಾರಾದರೂ ಕಂಡು ಬಂದರೆ 112 ಗೆ ಕರೆ ಮಾಡಿ ಎಂದು ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.