ರಸ್ತೆ ಅಪಘಾತ ಪ್ರಕರಣಗಳಲ್ಲಿ ಪರಿಹಾರದ ಅರ್ಜಿಗಳ ಶೀಘ್ರ ವಿಲೇವಾರಿಗೆ ಪೊಲೀಸ್ ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ಜೊತೆಗೆ ರಸ್ತೆ ಅಪಘಾತ ದತ್ತಾಂಶ, ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ವಿಮಾ ಇಲಾಖೆಯನ್ನು ಸಂಯೋಜಿಸಬೇಕು ಎಂಬುದೂ ಸೇರಿದಂತೆ ಕರ್ನಾಟಕ ಹೈಕೋರ್ಟ್ ನ ಕಲಬುರ್ಗಿ ಪೀಠವು ಹಲವು ಪ್ರಮುಖ ನಿರ್ದೇಶನಗಳನ್ನು ರಾಜ್ಯ ಸರ್ಕಾರಕ್ಕೆ ನೀಡಿದೆ.
ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪರಿಹಾರ ಕೋರಿ ಅರ್ಜಿ ಸಲ್ಲಿಕೆ ವಿಳಂಬವಾಗಿದೆ ಎಂದು ವಿಮಾ ಕಂಪೆನಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ. ಮೋಟಾರು ವಾಹನ ಅಪಘಾತ ಕಾಯಿದೆ ಇರುವುದೇ ಸಂತ್ರಸ್ತರಿಗೆ ಅನುಕೂಲಕ್ಕಾಗಿ, ಅದರಲ್ಲಿನ ತಾಂತ್ರಿಕ ಅಂಶಗಳೂ ಸೇರಿದಂತೆ ಎಲ್ಲ ಅಂಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಹೇಳಿದೆ.
ಮೋಟಾರು ವಾಹನ ಅಪಘಾತ ಕಾಯಿದೆಗೆ 2019ರಲ್ಲಿ ತಿದ್ದುಪಡಿ ಮಾಡಲಾಗಿದ್ದು, 2022ರಲ್ಲಿ ನಿಯಮಗಳನ್ನು ರೂಪಿಸಲಾಗಿದೆ. ಅದರಂತೆ ಅಪಘಾತ ನಡೆದ ಸಮಯದಲ್ಲಿ ತನಿಖಾಧಿಕಾರಿ ದಾಖಲಿಸುವ ಮೊದಲ ಅಪಘಾತ ವರದಿಯನ್ನೇ (ಎಫ್ ಎಆರ್) ಪರಿಹಾರದ ಅರ್ಜಿ ಎಂದು ಪರಿಗಣಿಸಬಹುದಾಗಿದೆ. ಹೀಗಾಗಿ ಅರ್ಜಿದಾರರು ತಡವಾಗಿ ಪರಿಹಾರ ಅರ್ಜಿ ಸಲ್ಲಿಸಿದ್ದಾರೆ ಎಂಬ ವಿಮಾ ಕಂಪನಿಯ ವಾದವನ್ನು ಪುರಸ್ಕರಿಸಲಾಗದು ಎಂದು ನ್ಯಾಯಾಲಯ ಹೇಳಿದೆ.
ತನಿಖಾಧಿಕಾರಿ ಎಫ್ ಎಆರ್ ಅನ್ನು ನ್ಯಾಯಾಲಯಕ್ಕೆ ತಲುಪಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಪರಿಹಾರ ಅರ್ಜಿ ಸಲ್ಲಿಸುವಲ್ಲಿ ವಿಳಂಬವಾಗಿದೆ ಎನ್ನುವ ವಾದದಲ್ಲಿ ಅರ್ಥವಿಲ್ಲ. ಎಲ್ಲ ಪೊಲೀಸ್ ಅಧಿಕಾರಿಗಳು ಎಫ್ ಎಆರ್ ದಾಖಲಿಸಿದ ನಂತರ ಮೋಟಾರು ವಾಹನ ಕಾಯಿದೆ ಸೆಕ್ಷನ್ 159 ಅನ್ನು ಪಾಲಿಸಬೇಕು. ಆಗ ನ್ಯಾಯಾಲಯ ಎಫ್ ಎಆರ್ ಅನ್ನು ಪರಿಹಾರದ ಅರ್ಜಿ ಎಂದು ಪರಿಗಣಿಸಿ ವಿಚಾರಣಾ ಪ್ರಕ್ರಿಯೆ ಆರಂಭಿಸಬಹುದು ಎಂದು ಪೀಠ ಆದೇಶಿಸಿದೆ.
ನ್ಯಾಯಾಲಯದ ನಿರ್ದೇಶನಗಳು
ಕೇಂದ್ರ ಮೋಟಾರು ವಾಹನ ತಿದ್ದುಪಡಿ ನಿಯಮ 2022 ಪರಿಣಾಮಕಾರಿ ಜಾರಿಗೆ ಡಿಜಿಪಿ, ಸಾರಿಗೆ ಆಯುಕ್ತರು, ಆರೋಗ್ಯ ಇಲಾಖೆ ಕಾರ್ಯದರ್ಶಿ ಮತ್ತು ಇ-ಆಡಳಿತ ಇಲಾಖೆ ಕಾರ್ಯದರ್ಶಿ ಕ್ರಮ ಕೈಗೊಳ್ಳಬೇಕು.
ರಾಜ್ಯ ಪೊಲೀಸ್ ಇಲಾಖೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರೂಪಿಸಿರುವ ಪರಿವಾಹನ್ ವೆಬ್ ಸೈಟ್ ಜೊತೆ ರಸ್ತೆ ಅಪಘಾತ ದತ್ತಾಂಶ/ಇ-ಡಿಟೈಲ್ ಆಕ್ಸಿಡೆಂಟ್ ರಿಪೋರ್ಟ್ (ಇ-ಡಿಎಆರ್) ಅನ್ನು ಸಂಯೋಜಿಸಬೇಕು.
ಪೊಲೀಸ್ ಇಲಾಖೆ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ರೂಪಿಸಿರುವ ಯೂನಿಕ್ ಡಿಸೇಬಿಲಿಟಿ ಐಡಿ ವೆಬ್ ತಾಣದ ಜೊತೆ ದತ್ತಾಂಶವನ್ನು ಸಂಯೋಜಿಸಬೇಕು. ಜೊತೆಗೆ ಕರ್ನಾಟಕ ಸರ್ಕಾರದಡಿ ಬರುವ ಎಫ್ ಎಸ್ ಎಲ್ ಗಳು ನೀಡಿರುವ ವರದಿಗಳನ್ನು ವಾಹನ್ ವೆಬ್ ಸೈಟ್ ನಲ್ಲಿ ಹಾಕಬೇಕು.
ದೇಶಾದ್ಯಂತ ವಿಮಾ ಸೇವೆ ಒದಗಿಸುತ್ತಿರುವ ವಿಮಾ ಕಂಪೆನಿಗಳು ಅಪಘಾತಕ್ಕೊಳಗಾದ ವಾಹನಗಳಿಗೆ ಮಾಡಿಸಿರುವ ವಿಮೆಯ ವಿವರಗಳನ್ನು ಪೊಲೀಸ್ ಇಲಾಖೆ ಇಂಟಿಗ್ರೇಟ್ ಮಾಡಬೇಕು.
ರಸ್ತೆ ಅಪಘಾತದಲ್ಲಿ ತೊಡಗಿರುವ ವಾಹನ, ಅದರ ಮಾಲೀಕರು, ಚಾಲಕರು ಮತ್ತಿತರ ವಿವರಗಳನ್ನು ಸಾರಿಗೆ ಇಲಾಖೆಯಿಂದ ಪಡೆದು ಅದನ್ನು ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಬೇಕು.
ಮೇಲಿನ ಎಲ್ಲಾ ದಾಖಲೆಗಳು ನ್ಯಾಯಾಲಯದ ಕೇಸ್ ಇನ್ಫರ್ಮೇಷನ್ ವ್ಯವಸ್ಥೆಯಲ್ಲಿ ಲಭ್ಯವಾಗುವಂತೆ ಮಾಡಬೇಕು.
ಈ ಎಲ್ಲ ನಿರ್ದೇಶನಗಳನ್ನು ಪಾಲಿಸಲು ನಾಲ್ಕು ವಾರಗಳಲ್ಲಿ ಈ ಕುರಿತು ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಬೇಕು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.