ಮನೆ ಅಪರಾಧ ಹಾವೇರಿ: ಬೈಕ್‌ ನಲ್ಲಿ ಬಂದ ದುಷ್ಕರ್ಮಿಗಳಿಂದ ವ್ಯಕ್ತಿಯೋರ್ವನಿಗೆ ಚೂರಿ ಇರಿತ

ಹಾವೇರಿ: ಬೈಕ್‌ ನಲ್ಲಿ ಬಂದ ದುಷ್ಕರ್ಮಿಗಳಿಂದ ವ್ಯಕ್ತಿಯೋರ್ವನಿಗೆ ಚೂರಿ ಇರಿತ

0

ಹಾವೇರಿ: ನಗರದ ಜಿಲ್ಲಾಡಳಿತ ಕಚೇರಿಗೆ ತೆರಳುವ ರಸ್ತೆಯ ದೇವಗಿರಿ-ಯಲ್ಲಾಪುರ ಬಳಿ ಬೈಕ್‌ ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊರ್ವನಿಗೆ ಚೂರಿ ಇರಿದ ಘಟನೆ ಗುರುವಾರ ಸಂಜೆ ನಡೆದಿದೆ.

ಸ್ಥಳೀಯ ಬಸವೇಶ್ವರನಗರದ ಎಸ್‌ ಬಿಐ ಬ್ಯಾಂಕ್ ನಿವೃತ್ತ ನೌಕರ ಜಯರಾಮ ಕೊಲ್ಲಾಪುರ (61) ಚೂರಿ ಇರಿತಕ್ಕೆ ಒಳಗಾದವರು.

ಜಿಲ್ಲಾಡಳಿತ ಭವನದಿಂದ ಸಂಜೆ ಬೈಕ್‌ನಲ್ಲಿ ಅವರ ಪುತ್ರನೊಂದಿಗೆ ನಗರಕ್ಕೆ ಆಗಮಿಸುತ್ತಿದ್ದರು. ಈ ವೇಳೆ ದೇವಗಿರಿ- ಯಲ್ಲಾಪೂರ ಬಳಿ ಬೈಕ್‌ ನಲ್ಲಿ ಬಂದ ನಾಲ್ಕು ದುಷ್ಕರ್ಮಿಗಳು ಜಯರಾಮ ಅವರ ಮೇಲೆ ಏಕಾಏಕಿ ಹಲ್ಲೆ ಮಾಡಿ ಬೆನ್ನಿಗೆ ಚೂರಿಯಿಂದ ಇರಿದಿದ್ದಾರೆ ಎನ್ನಲಾಗಿದೆ.

ತೀವ್ರವಾಗಿ ಗಾಯಗೊಂಡ ಜಯರಾಮ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಘಟನೆಯಲ್ಲಿ ಅವರ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಪಿ ಡಾ.ಶಿವಕುಮಾರ ಗುಣಾರೆ, ಎಎಸ್‌ಪಿ ಗೋಪಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.