ರಾಮನಗರ: ಬೆಂ-ಮೈ ಎಕ್ಸ್ ಪ್ರೆಸ್ ವೇನಲ್ಲಿ ರಾತ್ರಿ ಹೊತ್ತು ವಾಹನಗಳನ್ನು ಅಡ್ಡ ಹಾಕಿ ದರೋಡೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗಿರುವ ವಿಚಾರಕ್ಕೆ ಕುರಿತು ಪ್ರತಿಕ್ರಿಯಿಸಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಈ ವಿಚಾರ ಶುದ್ಧ ಸುಳ್ಳು ಇಲ್ಲಿ ಯಾವುದೇ ದರೋಡೆ ಪ್ರಕರಣ ನಡೆದಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ ಅವರು, ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ರಾತ್ರಿ ಹೊತ್ತು ವಾಹನಗಳನ್ನು ತಡೆದು ದರೋಡೆ ನಡೆಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್ ಪ್ರೆಸ್ ವೇ ದರೋಡೆಕೋರರ ಹಾವಳಿ ಎಂದು ಪೋಸ್ಟ್ ಮಾಡಲಾಗಿತ್ತು. ಇದು ಸತ್ಯಕ್ಕೆ ದೂರವಾದ ವಿಚಾರ ಇಲ್ಲಿ ಒಂದು ಘಟನೆ ನಡೆದಿದ್ದು, ಬಿಟ್ಟರೆ ಬೇರೆ ಯಾವುದೇ ಪ್ರಕರಣ ನಡೆದಿಲ್ಲ ಹಾಗಾಗಿ ಯಾರು ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದು ಹೇಳಿದ್ದಾರೆ.
ಜಾಲತಾಣದಲ್ಲಿ ಹಾಕಿರುವ ಸುಳ್ಳು ಸುದ್ದಿ ಅಲ್ಲದೆ ಈ ಪೋಟೋದಲ್ಲಿರುವ ರಸ್ತೆ ಭಾರತಕ್ಕೆ ಸಂಬಂಧಿಸಿದ್ದಲ್ಲ. ಇದು ಹೊರ ದೇಶಕ್ಕೆ ಸಂಬಂಧಿಸಿದ ಪೋಸ್ಟ್ ಆಗಿದೆ. ಬೆಂ-ಮೈ ಎಕ್ಸ್ ಪ್ರೆಸ್ ವೇನಲ್ಲಿ ಯಾವುದೇ ದರೋಡೆಗಳು ಆಗುತ್ತಿಲ್ಲ. ಅಲ್ಲದೆ ಹೈವೇ ಪ್ಯಾಟ್ರೋಲ್ ಇಪ್ಪತ್ತನಾಲ್ಕು ಗಂಟೆ ಕೆಲಸ ಮಾಡುತ್ತಿದೆ. ಈ ಹಿಂದೆ ಆಗಿದ್ದ ದರೋಡೆಗಳ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನ ಈಗಾಗಲೇ ಬಂಧಿಸಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವುದು ಸುಳ್ಳು ಸುದ್ದಿ ಇದಕ್ಕೆ ಯಾರು ಕಿವಿಗೊಡಬೇಡಿ ಎಂದು ಹೇಳಿದ್ದಾರೆ.
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
ಬೀಜಗಳಿಂದ ತಯಾರಾದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.