ಮನೆ ಅಪರಾಧ ದ್ವಿಚಕ್ರ ವಾಹನ – ಬೊಲೆರೋ ಡಿಕ್ಕಿ: ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನ – ಬೊಲೆರೋ ಡಿಕ್ಕಿ: ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

0

ತುಮಕೂರು: ದ್ವಿಚಕ್ರ ವಾಹನ ಹಾಗೂ ಬೊಲೆರೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಡಮಲ ಕುಂಟೆ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಈಶ್ವರ್(17) ಯಶ್ವಂತ್(19) ಮೃತ ದುರ್ದೈವಿ.  ರಾಮು(19) ಎಂಬ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಪಾವಗಡ ಸರ್ಕಾರಿ ‌ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆ ಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಧ್ರದಿಂದ ಆಂಧ್ರದ ರೊದ್ದಂ ತಾಲ್ಲೂಕಿನ ಚಿನ್ನಿ ಕೊಡಿಪಲ್ಲಿ ಎಂಬ ಗ್ರಾಮದ ಮೂವರು ಯುವಕರು ಬೈಕ್‌ ನಲ್ಲಿ ಪಾವಗಡದ ಶನಿಮಹಾತ್ಮ ದೇವಸ್ಥಾನಕ್ಕೆ ಬರುತ್ತಿದ್ದರು. ಈ ವೇಳೆ ಅಪಪಘಾತ ಸಂಭವಿಸಿದೆ.

ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.