ಮನೆ ಅಪರಾಧ ರಾಯಚೂರು: ಕುಡಿದ ಮತ್ತಿನಲ್ಲಿ ಸ್ನೇಹಿತನಿಂದಲೇ ಯುವಕನ ಕೊಲೆ

ರಾಯಚೂರು: ಕುಡಿದ ಮತ್ತಿನಲ್ಲಿ ಸ್ನೇಹಿತನಿಂದಲೇ ಯುವಕನ ಕೊಲೆ

0

ರಾಯಚೂರು: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಯುವಕ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲ್ಲೂಕು ನಾಗರಾಳ ಗ್ರಾಮದಲ್ಲಿ ನಡೆದಿದೆ.

ರವಿಕುಮಾರ (33) ಕೊಲೆಯಾದ ಯುವಕ. ಹುಬ್ಬಳ್ಳಿ ಮೂಲದ ಪವನ ಕುಮಾರ ಕೊಲೆ ಆರೋಪಿ.

ನಿನ್ನೆ ರಾತ್ರಿ ಮೃತನ ಮನೆ ಟೆರೇಸ್ ಮೇಲೆ ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಕುಡಿದ ಮತ್ತಲ್ಲಿ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದ್ದು, ನೈಟ್ ಪ್ಯಾಂಟ್ ಲೇಸ್ ಕುತ್ತಿಗೆಗೆ ಬಿಗಿದು ಸ್ನೇಹಿತನನ್ನು ಕೊಲೆ ಮಾಡಲಾಗಿದೆ.

ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.