ಚಿಂತಾಮಣಿ (ಚಿಕ್ಕಬಳ್ಳಾಪುರ): ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥರಾಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬುಧವಾರದ ಬೆಳಗ್ಗೆ ನಡೆದಿದೆ.
ತಾಲೂಕಿನ ಅಂಬಾಜಿದುರ್ಗ ಹೋಬಳಿ ಕೋಟಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಕೆ.ರಾಗುಟ್ಟಹಳ್ಳಿ ಹಾಸ್ಟೆಲ್ ನಲ್ಲಿ ನೆಲೆಸಿರುವ ವಿದ್ಯಾರ್ಥಿಗಳಾದ ಶ್ರೀನಿವಾಸ್. ಭರತ್.ಶಶಿಕುಮಾರ್.ಗಗನ್. ಪ್ರಭಾಸ್.ಭವೇಶ್. ಅರವಿಂದ್. ಯಶ್ವಂತ್. ನವದೀಪ್.ಅಭಿಷೇಕ್. ರಾಜೇಶ್.ಲಕ್ಷ್ಮಿ ನಾಯಕ್.ನವೀನ್ ತೇಜ.ರಾಮ್ ಚರಣ್. ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂದು ಬೆಳಗಿನ ಉಪಹಾರಕ್ಕೆ ಇಡ್ಲಿ, ಸಾಂಬಾರ್ ಸೇವಿಸಿದ ನಂತರ ಅಸ್ವಸ್ಥರಾಗಿ ಹೊಟ್ಟೆನೋವು,ವಾಂತಿ ಭೇದಿಯಿಂದ ಬಳಲಾರಂಭಿಸಿದ್ದು ತಕ್ಷಣವೇ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಪ್ರಾಯಶಃ ಫುಡ್ ಪಾಯಜನ್ ಆಗಿರಬಹುದು ಎನ್ನಲಾಗಿದ್ದು ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಇನ್ನೂ ಘಟನೆಯ ವಿಷಯ ತಿಳಿದ ಕೂಡಲೆ ತಾಲೂಕು ದಂಡಾಧಿಕಾರಿಗಳಾದ ಸುದರ್ಶನ್ ಯಾದವ್ ಜಿಲ್ಲಾ ಆರೋಗ್ಯ ಅಧಿಕಾರಿ ಹಾಸ್ಟೆಲ್ ಗೆ ಬೇಟಿ ನೀಡಿ ಪರಿಶೀಲನೆ ನಡೆಸಿ ಬೆಳಗ್ಗೆ ಮಾಡಲಾಗಿದ್ದ, ಇಡ್ಲಿ ಸಾಂಬಾರ್ ಅನ್ನು ಪರಿಶೀಲನೆ ನಡೆಸಿ ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ಬೇಟಿ ಮಾಡಿದ ವರದಿಗಾರರೊಂದಿಗೆ ತಿಳಿಸಿದ್ದಾರೆ.
ಚಿಂತಾಮಣಿ ಉಪ ವಿಭಾಗದ ಎ ಎಸ್ ಪಿ ಕುಶಲ್ ಚೌಕ್ಸೆ,ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹಾಸ್ಟೆಲ್ ಅಡುಗೆ ಸಹಾಯಕರಲ್ಲಿ ಅಡುಗೆ ಮಾಡುವ ವಿಚಾರವಾಗಿ ಗೊಂದಲವಿದ್ದು ಈ ಘಟನೆಗೆ ಇದೇ ಸಾಕ್ಷಿ ಯಾಗಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.