ಮನೆ ಅಪರಾಧ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ವಾಹನ ಸವಾರೆ ಸಾವು

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ವಾಹನ ಸವಾರೆ ಸಾವು

0

ಮಡಿಕೇರಿ: ಎರಡು ದ್ವಿ ಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದ್ವಿ ಚಕ್ರ ವಾಹನ ಸವಾರೆ ಮೃತಪಟ್ಟ ಘಟನೆ ವಿರಾಜಪೇಟೆ – ಅಮ್ಮತ್ತಿ ರಸ್ತೆಯ ಸುಂಕದಕಟ್ಟೆ ಬಳಿ ಸಂಭವಿಸಿದೆ.

ಅಮ್ಮತ್ತಿಯ ಕೆನರಾ ಬ್ಯಾಂಕ್ ಉದ್ಯೋಗಿ, ಮೂಲತಃ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಅಮೃತ (24) ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಅಮ್ಮತ್ತಿಯ ಕೆನರಾ ಬ್ಯಾಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ವಿರಾಜಪೇಟೆ ನಗರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು.