ಗುತ್ತಿಗಾರು: ತಮಿಳುನಾಡು ಮೂಲದ ರಬ್ಬರ್ ಕಾರ್ಮಿಕ ದಂಪತಿ ಎಲಿಮಲೆಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ. 22ರ ಮಂಗಳವಾರ ವರದಿಯಾಗಿದೆ.
ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ.
ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.
ರಾಜನ್ ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು ಎಂದು ಹೇಳಲಾಗಿದೆ.














