ಮನೆ ಅಪರಾಧ ಹುಬ್ಬಳ್ಳಿ ಗಲಾಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಸಿಎಂ ಬೊಮ್ಮಾಯಿ.

ಹುಬ್ಬಳ್ಳಿ ಗಲಾಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಸಿಎಂ ಬೊಮ್ಮಾಯಿ.

0

ಬೆಂಗಳೂರು:  ಹುಬ್ಬಳ್ಳಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಘಟನೆ ಹಿಂದೆ ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣದ ಬಗ್ಗೆ ತನಿಖೆಯಾಗುತ್ತಿದೆ. ಈಗಾಗಲೇ ಆರೋಪಿಗಳನ್ನ ಬಂಧಿಸಿದ್ದೇವೆ.  ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದರು.

ಪಿ ಎಸ್ ಐ ನೇಮಕಾತಿಯಲ್ಲಿ ಅಕ್ರಮ ವಿಚಾರ ಗೃಹ ಸಚಿವರ ಗಮನಕ್ಕೆ ಬಂದಿದೆ. ಗೃಹಸಚಿವರು ಕೂಡಲೇ ಸಿಐಡಿ ತನಿಖೆಗೆ ಕೊಟ್ಟಿದ್ದಾರೆ.  ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಸಮಗ್ರ ತನಿಖೆ ನಡೆಸುತ್ತೇವೆ. ವರದಿ ಬಂದ ಬಳಿಕ ಮರುಪರೀಕ್ಷೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.