ಯಾದಗಿರಿ: ನಗರಸಭೆ ಅಕ್ರಮ ಬಯಲಿಗೆಳೆದ ಪೌರಾಯುಕ್ತ ಸಂಗಪ್ಪ ಉಪಾಸೆ ಅವರಿಗೆ ಜೀವ ಬೆದರಿಕೆ ಕರೆಗಳು ಬರಲಾರಂಭಿಸಿದ್ದು, ರಕ್ಷಣೆ ಕೋರಿ ಉಪಾಸೆ ಅವರು ಪೊಲೀಸರ ಮೊರೆ ಹೋಗಿದ್ದಾರೆ.
ಹಿಂದಿನ ಅಧಿಕಾರಿಗಳ ಅಕ್ರಮ ಬಯಲಿಗೆಳೆದ ನಂತರ ಸಂಗಪ್ಪ ಅವರಿಗೆ ಜೀವ ಬೆದರಿಕೆ ಕರೆಗಳು ಬರಲಾರಂಭಿಸಿದ್ದು, ಕಚೇರಿ ಬಳಿ ಪ್ರತಿನಿತ್ಯ ಅನಾಮಿಕ ವ್ಯಕ್ತಿಗಳು ಓಡಾಡಲು ಆರಂಭಿಸಿದ್ದಾರೆ ಎಂದು ಆರೋಪಿಸಲಾಗಿದೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೃಷಿ ಭೂಮಿಯಲ್ಲಿ 1,310 ಖಾತಾ ನೀಡಿ ಸರ್ಕಾರದ ಬೊಕ್ಕಸಕ್ಕೆ 18 ಕೋಟಿ ರೂ. ನಷ್ಟ ಆಗಿರುವುದನ್ನು ಪೌರಾಯುಕ್ತ ಸಂಗಪ್ಪ ಅವರು ಪತ್ತೆ ಹಚ್ಚಿದ್ದರು. ಅಲ್ಲದೇ ನಾಲ್ಕು ಕೋಟಿ ಮೌಲ್ಯದ ಸರ್ಕಾರಿ ಜಾಗವನ್ನ ಖಾಸಗಿ ವ್ಯಕ್ತಿಗಳ ಹೆಸರಿಗೆ ಪರಭಾರೆ ಮಾಡಿದ್ದನ್ನ ಬಯಲಿಗೆ ಎಳೆದಿದ್ದರು. ಇದೇ ಪ್ರಕರಣ ಸಂಬಂಧ ನಗರಸಭೆ ಸದಸ್ಯೆಯ ಪತಿ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಅವರ ಹೆಸರು ಪ್ರಸ್ತಾಪಿಸಿದ್ದರು.
ಇದೇ ಕಾರಣಕ್ಕೆ ನಿತ್ಯವೂ ಅನಾಮಿಕ ವ್ಯಕ್ತಿಗಳು ಕಚೇರಿ ಸುತ್ತವೂ ಓಡುತ್ತಿದ್ದಾರೆ. ರಾತ್ರಿ ವೇಳೆ ಬೇದರಿಕೆ ಕರೆಗಳು ಬರುತ್ತಿವೆ. ನನ್ನ ತೇಜೋವಧೆ ಮಾಡುವುದಲ್ಲದೇ, ನನ್ನ ವಿರುದ್ಧ ಸಂಚು ರೂಪಿಸುತ್ತಿದ್ದಾರೆ. ಹೀಗಾಗಿ ರಕ್ಷಣೆ ನೀಡುವಂತೆ ಪೌರಾಯಕ್ತ ಸಂಗಪ್ಪ ಉಪಾಸೆ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.