ಬೆಂಗಳೂರು: ಎಂಬಿಬಿಎಸ್ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಸಮುದಾಯದ ಮೆರಿಟ್ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣ ಐದು ಲಕ್ಷ ರೂ.ಗೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಯೋಜನೆಗಳಿಗೆ ಚಾಲನೆ ನೀಡಿದ ಅವರು, ಪ್ರಸ್ತುತ ಕೆ ಎಂ ಡಿಸಿ ವತಿಯಿಂದ ಸರ್ಕಾರಿ ಕೋಟಾದಡಿ ಸೀಟು ಪಡೆಯುವ ಮೆರಿಟ್ ವಿದ್ಯಾರ್ಥಿಗಳಿಗೆ ಮೂರು ಲಕ್ಷ ರೂ. ಸಾಲ ನೀಡಲಾಗುತ್ತಿದ್ದು, ಬೇಡಿಕೆ ಮೇರೆಗೆ ಅದನ್ನು ಐದು ಲಕ್ಷ ರೂ. ಗಳಿಗೆ ಏರಿಸುವ ಬಗ್ಗೆ ಚಿಂತನೆ ನಡೆಸಿದ್ದು, ಬಡ ಕುಟುಂಬಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದರು.
ಅದೇ ರೀತಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದೇಶ ದಲ್ಲಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ ಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡ ಬಯಸಿದರೆ ಪ್ರಸ್ತುತ 20 ಲಕ್ಷ ರೂ. ಶಿಕ್ಷಣ ಸಾಲ ನೀಡಲಾಗುತ್ತಿದ್ದು, ಇದೀಗ ಎನ್ ಎಂಡಿಸಿ ನೆರವಿನೊಂದಿಗೆ ಹತ್ತು ಲಕ್ಷ ಹೆಚ್ಚುವರಿ ಯಾಗಿ ಒಟ್ಟು 30 ಲಕ್ಷ ರೂ.ಸಾಲ ಸೌಲಭ್ಯ ಒದಗಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಕಳೆದ ಮೂರು ವರ್ಷ ಗಳಿಂದ ನ್ಯಾಷನಲ್ ಮೈನಾರಿಟಿ ಡೆವಲಪ್ಮೆಂಟ್ ಬೋರ್ಡ್ ನ ಯೋಜನೆಗಳು ರಾಜ್ಯಕ್ಕೆ ಪಡೆಯುತ್ತಿರಲಿಲ್ಲ. ಇತ್ತೀಚಿಗೆ ಸಭೆ ನಡೆಸಿ ನಿರ್ದೇಶನ ನೀಡಿ ಪತ್ರ ವ್ಯವಹಾರ ನಡೆಸಿದ ನಂತರ ವಾರ್ಷಿಕ 50 ಕೋಟಿ ರೂ. ಅನುದಾನ ರಾಜ್ಯಕ್ಕೆ ಈ ವರ್ಷ ದೊರೆಯುತ್ತಿದೆ ಎಂದು ತಿಳಿಸಿದರು.
ನಿಗಮದ ವತಿಯಿಂದ ಇಂದು ಎಂಟು ಯೋಜನೆಗೆ ಚಾಲನೆ ನೀಡಿದ್ದು ಆ ಪೈಕಿ ಅರಿವು ಸೇರಿ ನಾಲ್ಕು ಹಳೇ ಯೋಜನೆ ಮತ್ತೆ ಆರಂಭಿಸಲಾಗಿದೆ. ನಾಲ್ಕು ಹೊಸ ಯೋಜನೆ ಪ್ರಾರಂಭಿಸಲಾಗುತ್ತಿದೆ. ನಿರುದ್ಯೋಗಿಗಳಿಗೆ ಕಾರು ಸೇರಿ ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡುವ ಸ್ವಾವಲಂಬಿ, ತಾಂತ್ರಿಕ ಕೌಶಲ್ಯ ತರಬೇತಿ ನೀಡುವ ಶ್ರಮಶಕ್ತಿ, ವಿಧವೆ, ವಿಚ್ಚೆಧಿತ, ಅವಿವಾಹಿತ ಮಹಿಳೆಯರಿಗೆ 50 ಸಾವಿರ ಸಾಲ ನೀಡುವ ಹಾಗೂ ವೃತ್ತಿ ಪ್ರೋತ್ಸಾಹ ಯೋಜನೆಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ, ಕೆ ಎಂ ಡಿಸಿ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಜೀರ್ ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.