ನವದೆಹಲಿ: ಸಾಮಾಜಿಕ ಜಾಲತಾಣಗಳನ್ನು ಬಳಸುವವರು ತಮ್ಮ ಚಟುವಟಿಕೆಗಳಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಎಚ್ಚರದಿಂದ ಇರಬೇಕು. ಸೋಷಿಯಲ್ ಮೀಡಿಯಾ ಬಳಸುವುದು ತಮಗೆ ಅಗತ್ಯ ಎಂದು ಅವರು ಭಾವಿಸಿದ್ದರೆ ಅದರ ಪರಿಣಾಮಗಳನ್ನು ಎದುರಿಸಲೂ ಸಿದ್ಧರಿರಬೇಕು ಎಂದು ಸುಪ್ರೀಂಕೋರ್ಟ್ ತೀಕ್ಷ್ಣವಾಗಿ ಹೇಳಿದೆ.
ತಮಿಳುನಾಡಿನ ಮಾಜಿ ಶಾಸಕ ಹಾಗೂ ನಟ ಎಸ್.ವಿ.ಶೇಖರ್ ಎಂಬುವರು 2018ರಲ್ಲಿ ಫೇಸ್ಬುಕ್ನಲ್ಲಿ ಪತ್ರಕರ್ತೆಯರ ಬಗ್ಗೆ ಅವಹೇಳನಕಾರಿಯಾದ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿತ್ತು. ಅದನ್ನು ರದ್ದುಪಡಿಸುವಂತೆ ಅವರು ಮದ್ರಾಸ್ ಹೈಕೋರ್ಟ್ ಗೆ ಹೋಗಿದ್ದರು. ಅಲ್ಲಿ ಅರ್ಜಿ ವಜಾಗೊಂಡಿತ್ತು. ಅವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅದನ್ನು ಶುಕ್ರವಾರ ವಜಾಗೊಳಿಸಿದ ಸುಪ್ರೀಂಕೋರ್ಟ್ , ‘ಸೋಷಿಯಲ್ ಮೀಡಿಯಾ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು’ ಎಂದು ಕಿವಿಮಾತು ಹೇಳಿತು.
ಶೇಖರ್ ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಶೇರ್ ಮಾಡುವಾಗ ಕಣ್ಣಿಗೆ ಔಷಧಿ ಬಿಟ್ಟುಕೊಂಡಿದ್ದರು. ಹೀಗಾಗಿ ಅವರಿಗೆ ಅಲ್ಲಿ ಏನು ಬರೆದಿದೆ ಎಂಬುದು ಸರಿಯಾಗಿ ಕಾಣಿಸಿರಲಿಲ್ಲ. ಪೋಸ್ಟ್ನಲ್ಲಿ ಪತ್ರಕರ್ತೆಯರ ಬಗ್ಗೆ ಅವಹೇಳನಕಾರಿಯಾದ ಅಂಶವಿರುವುದು ತಿಳಿದ ಕೂಡಲೇ ಅದನ್ನವರು ಡಿಲೀಟ್ ಮಾಡಿದ್ದರು ಎಂದು ಅವರ ಪರ ವಕೀಲರು ವಾದಿಸಿದ್ದರು. ಅದನ್ನು ಸುಪ್ರೀಂಕೋರ್ಟ್ ಒಪ್ಪಿಕೊಳ್ಳಲಿಲ್ಲ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.