ಮನೆ ಸುದ್ದಿ ಜಾಲ ಮಗನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಮಗನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

0

Join Our Whatsapp Group

ಹಲಗೂರು:ಸಮೀಪದ ಕೊನ್ನಾಪುರ ಗ್ರಾಮದ ಅಭಿಷೇಕ್ (28)ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದು ಅವರ ಮನೆಯವರು ಅವನ ಅಂಗಾಂಗವನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಅಭಿಷೇಕ್ ಪುರದೊಡ್ಡಿ ಗ್ರಾಮಕ್ಕೆ ಹೋಗಿ ವಾಪಸ್ ಸ್ವಗ್ರಾಮಕ್ಕೆ ಬರುವಾಗ ಟಿ.ಕೆ.ಹಳ್ಳಿಯ ಬಳಿ ಬುಲೆಟ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ತಕ್ಷಣ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಮೆದಳು ನಿಷ್ಕ್ರಿಯಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಸಾವಿನಲ್ಲೂ ಸಾರ್ಥಕತೆ ಮೆರೆದ ತಾಯಿ ಸರಸ್ವತಿ ಹಾಗೂ ಕುಟುಂಬಸ್ಥರು ಮೃತ ಅಬಿಷೇಕ್ ನ ಹೃದಯ ಹಾಗೂ ಕಿಡ್ನಿಯನ್ನು ಅಪೋಲೋ ಆಸ್ಪತ್ರೆಗೆ ದಾನ ಮಾಡಿದ್ದಾರೆ.

ಮೃತ ಅಭಿಷೇಕನ ಅಂತ್ಯಕ್ರಿಯೆ ಅವರ ಸ್ವಗ್ರಾಮ ಕೊನ್ನಾಪುರ ಗ್ರಾಮದಲ್ಲಿ ನಡೆಯಿತು.