ಮಂಡ್ಯ: ಕರ್ತವ್ಯಕ್ಕೆ ಬರದ ಶಿಕ್ಷಕನಿಗೆ 7 ವರ್ಷದಿಂದ ಶಿಕ್ಷಣ ಇಲಾಖೆ ಸಂಬಳ ಪಾವತಿಸುತ್ತಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ನೆಲಮನೆ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಕಾಡಪ್ಪ ಬೋಳ ಎಂಬ ಶಿಕ್ಷಕ ಕಳೆದ 7 ವರ್ಷದಿಂದ ಶಾಲೆಗೆ ಬರದೇ ಕಳ್ಳಾಟವಾಡುತ್ತಿದ್ದಾನೆ.
ಎಸ್ ಡಿಎಂಸಿ ಸಭೆಯ ವೇಳೆ ಶಿಕ್ಷಕ ಶಾಲೆಗೆ ಬರದಿದ್ರು ಇಲಾಖೆಯಿಂದ ಸರ್ಕಾರಿ ಸಂಬಳ ಪಾವತಿಯಾಗುತ್ತಿರುವುದು ಬೆಳಕಿಗೆ ಬಂದಿದೆ.
2014 ರಲ್ಲಿ ಈತ ಈ ಶಾಲೆಗೆ ಬಂದು 2 ವರ್ಷವಷ್ಟೇ ಕರ್ತವ್ಯ ನಿರ್ವಹಿಸಿದ್ದಾರೆ. ಬಳಿಕ ಈತ ಶಾಲೆಗೆ ಶಾಲೆಗೆ ಹಾಜರಾಗಿಲ್ಲ. ಆದರೆ ತಿಂಗಳ ಕೊನೆಗೆ ಹಾಜರಾತಿ ಪುಸ್ತಕಕ್ಕೆ ನಿತ್ಯ ಸಹಿ ಮಾಡಲಾಗಿದೆ.
ತನ್ನ ಪುಡಾರಿ ರಾಜಕೀಯದಿಂದ ಇಲಾಖೆ ಅಧಿಕಾರಿಗಳು ಮತ್ತು ಸಹಶಿ ಕ್ಷಕರ ಮೇಲೆ ಪ್ರಭಾವ ಬೀರಿದ್ದು, ತನ್ನ ಬದಲು ಬೇರೊಬ್ಬಬ್ಬ ಅತಿಥಿ ಶಿಕ್ಷಕನನ್ನು ನೇಮಿಸಿ 5 ಸಾವಿರ ಸಂಬಳ ನೀಡುತ್ತಿರುವುದು ಗೊತ್ತಾಗಿದೆ.
ಪ್ರಕರಣ ಬೆಳಕಿಗೆ ಬರದಂತೆ ಸಹ ಶಿಕ್ಷಕರು ಹಾಜರಾತಿಯಲ್ಲಿ ಆತನಿಗೆ ಗಳಿಕೆ ರಜೆ ತೋರಿಸಿದ್ದರು. ಸರ್ಕಾರದ ಕಣ್ಣಿಗೆ ಮಣ್ಣೆರಚಿ ಸಂಬಳ ಪಡೆಯುತ್ತಿರುವ ಶಿಕ್ಷಕನ ವಿರುದ್ಧ ಗ್ರಾಮಸ್ಥರು ತಿರುಗಿ ಬಿದ್ದಿದ್ದಾರೆ.
ಗೈರು ಹಾಜರಾಗಿ ಸಂಬಳ ಪಡೆಯುತ್ತಿರೋ ಶಿಕ್ಷಕನ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.