ಮನೆ ರಾಜ್ಯ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮನ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮನ

0

ಮೈಸೂರು: ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಆವರಣಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಮಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹ್ದದೇವಪ್ಪ, ಜಿಲ್ಲಾಧಿಕಾರಿ ರಾಜೇಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದರು.

ಈ ವೇಳೆ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಮುಖ್ಯಮಂತ್ರಿಗಳು ಗೌರವ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಇಂದಿನಿಂದ ಮೂರು ದಿನಗಳಲ್ಲಿ ಮೈಸೂರು ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿವೆ. ಸರ್ಕಾರ ಘೋಷಿಸಿದ 4 ನೇ ಗ್ಯಾರೆಂಟಿ ಗೃಹಲಕ್ಷ್ಮಿ ಯೋಜನೆಗೆ ಆ. 30 ರಂದು ಚಾಲನೆ ನೀಡಲಾಗುತ್ತಿದೆ ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಜನ ಸೇರುತ್ತಿದ್ದಾರೆ ಎಂದು ಅವರು ತಿಳಿಸಿದರು.

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಿಂದ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮಕ್ಕೆ ಆಗಮಿಸುವರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.