ಮನೆ ರಾಜಕೀಯ ಎಂಪಿ ಚುನಾವಣೆಗೆ 28 ಕ್ಷೇತ್ರದಲ್ಲಿ ಸ್ಪರ್ಧೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಎಂಪಿ ಚುನಾವಣೆಗೆ 28 ಕ್ಷೇತ್ರದಲ್ಲಿ ಸ್ಪರ್ಧೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

0

Join Our Whatsapp Group

ಎಂಪಿ ಚುನಾವಣೆಗೆ 28 ಕ್ಷೇತ್ರದಲ್ಲೂ ಅಭ್ಯರ್ಥಿ ಹಾಕಬೇಕು ಎಂಬ ಅಭಿಪ್ರಾಯ ಇದೆ. ಸ್ವತಂತ್ರವಾಗಿ ಚುನಾವಣೆ ಎದುರಿಸಬೇಕು ಎಂದುಕೊಂಡಿದ್ದೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಮೈತ್ರಿ ಮಾಡಿಕೊಂಡರೆ, ಮೈತ್ರಿ ಮಾಡಿಕೊಳ್ಳದ ಕ್ಷೇತ್ರದಲ್ಲಿ ಕಾರ್ಯಕರ್ತರು ಏನು ಮಾಡ್ತಾರೆ. ಕಳೆದ ಬಾರಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಏನು ಅನುಕೂಲಾ ಆಯ್ತು. ಕಾಂಗ್ರೆಸ್ ನಿಂದ ಕುತ್ತಿಗೆ ಕೊಯ್ಯುವ ಕೆಲಸ ಆಯ್ತು. ಮೈತ್ರಿಯಿಂದ ನನ್ನ ಕಾರ್ಯಕರ್ತರು ಬಲಿಪಶುಗಳು ಆಗಬಾರದು. ಮೈತ್ರಿ ಆಗದೇ ಇದ್ದಿದ್ರೆ ಮಂಡ್ಯದಲ್ಲಿ ಸೋಲುವ ಪ್ರಶ್ನೆ ಇರ್ತಾ ಇರಲಿಲ್ಲ. ಎಂದರು.

28 ಕ್ಷೇತ್ರದಲ್ಲಿ ಗೆಲ್ಲುತ್ತೇವೆಂದು ನಾನು ಹೇಳಲ್ಲ. ನಾಲ್ಕೈದು ಕ್ಷೇತ್ರಗಳಲ್ಲಿ ನಾವು ಗೆಲ್ಲಿವ ವಿಶ್ವಾಸ ಇದೆ. 28 ಕ್ಷೇತ್ರಗಳಲ್ಲಿ ಕಾರ್ಯಕರ್ತರನ್ನು ಉಳಿಸಿಕೊಳ್ಳಲು ಕೆಲಸ ಮಾಡ್ತೀವಿ ಎಂದರು.

ಮುಂದಿನ ಐದು ವರ್ಷ ನಿಖಿಲ್ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ

ನಿಖಿಲ್ ಗೆ ರಾಜಕೀಯದ ಸಹವಾಸ ಹೋಗಬೇಡ ಎಂದು ಸಲಹೆ ನೀಡಿದ್ದೇನೆ ಮುಂದಿನ ಐದು ವರ್ಷ ನಿಖಿಲ್ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ದಯವಿಟ್ಟು ರಾಜಕೀಯ ಜಂಗುಳಿ ಬಿಟ್ಟು ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು ನಿಖಿಲ್ ಗೆ ಹೇಳಿದ್ದೇನೆ. ಈಗಾಗಲೇ ಮೂರು ಚಿತ್ರಗಳನ್ನು ನಿರ್ಮಾಣ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಸಿನಿಮಾ ಮಾಡಲು ನಿಖಿಲ್ ಮುಖ ಮಾಡಿದ್ದಾರೆ ಎಂದರು.

ನಿಖಿಲ್ ಚುನಾವಣೆಗೆ ನಿಲ್ಲುವ ಪ್ರಶ್ನೆ ಇಲ್ಲ. ಈಗಾಗಲೇ ಎರಡು ಬಾರಿ ನಿಖಿಲ್ ಸೋತಿದ್ದಾನೆ. ಮಂಡ್ಯ ಎಂಪಿ ಚುನಾವಣಗೆ ನಿಲ್ಲೂವಾಗಲೂ ಬೇಡಾ ಅಂದಿದ್ದೆ. ನಿಖಿಲ್ ಮಂಡ್ಯದಲ್ಲಿ ನಿಲ್ಲಲು ತಯಾರು ಇರಲಿಲ್ಲ. ಶಾಸಕರು ಹಾಗೂ ಕಾರ್ಯಕರ್ತರ ಒತ್ತಡದಿಂದ ಚುನಾವಣೆಗೆ ತಲೆ ಕೊಟ್ಟ. ಸೋಲು ಗೆಲುವು ಇರುತ್ತೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ. ದೇವೇಗೌಡರು, ನಾನು ಎಲ್ಲರೂ ಸೋತಿದ್ದೇವೆ. ಜನಾಭಿಪ್ರಾಯ ಏನು ಇದೆ ಅದಕ್ಕೆ ತಲೆಬಾಗಬೇಕು. ನಾನು ಒತ್ತಡಗಳ ಮೇಲೆ ಚುನಾವಣೆ ಮಾಡಲ್ಲ. ಸದ್ಯಕ್ಕೆ ನಿಖಿಲ್ ಗೆ ರಾಜಕೀಯ ಬೇಡಾ ಅಂತಾ ಹೇಳಿದ್ದೇನೆ. ಮುಂದೆ ನೋಡೋಣಾ, ಅವನ ಹಣೆಯಲ್ಲಿ ಬರೆದಿದ್ರೆ ನಾನು ತಪ್ಪಿಸೋಕೆ ಆಗಲ್ಲ ಎಂದು ತಿಳಿಸಿದರು.

ನಿಖಿಲ್ ಕುತಂತ್ರಕ್ಕೆ ಬಲಿಯಾಗಿದ್ದಾನೆ. ಇದೀಗ ಅದೇ ಜನ ಪಶ್ಚಾತ್ತಾಪ ಪಡುವಂತೆ ಆಗಿದೆ. ಇದೇ ರಾಮನಗರದ ಜನರು ಎಲ್ಲಾ ನೋಡ್ತಾ ಇದ್ದಾರೆ. ರಾಮನಗರವನ್ನು ಹೇಗೆ ಉದ್ಧಾರ ಮಾಡ್ತಾ ಇದಾರೆ ಅಂತಾ ನೋಡ್ತಾ ಇದೀನಿ ಎಂದು ಹೇಳಿದರು.

ಕಾವೇರಿ ವಿಚಾರದಲ್ಲಿ ಸರ್ಕಾರ ಹುಡುಗಾಟಿಕೆ ಬಿಡಬೇಕು

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಮಾತನಾಡಿ, ಕಾವೇರಿ ವಿಚಾರದಲ್ಲಿ ಸರ್ಕಾರ ಹುಡುಗಾಟಿಕೆ ಬಿಡಬೇಕು. ನಿಮ್ಮ ಗ್ಯಾರಂಟಿ ಜೊತೆಗೆ ರೈತರಿಗೆ 6ನೇ ಗ್ಯಾರಂಟಿ ಕೊಡಿ. ರೈತರಿಗೆ ಬೆಳೆ ಬೆಳೆಯ ಬೇಡಿ ಪರಿಹಾರ ಕೊಡ್ತೇವೆ ಅಂತ ಘೋಷಣೆ ಮಾಡಿ. ಸಾಲ ಸೋಲ ಮಾಡಿ ರೈತರು ಆತ್ಮಹತ್ಯೆ ಮಾಡಿಕೊಳ್ಳೋದು ತಪ್ಪುತ್ತೆ ಎಂದು ಒತ್ತಾಯಿಸಿದರು.

ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಿಲ್ಲ. ವಾಟರ್ ಮ್ಯಾನೆಜ್ ಮೆಂಟ್ ಬೋರ್ಡ್ ನವರು ಬೀಡಿ ಅಂತ ತಕ್ಷಣ ಸರ್ಕಾರ ಬಿಡುಗಡೆ ಮಾಡಿದ್ದಾರೆ. ಪ್ರತಿಭಟನೆ ಮಾಡಬೇಕಿತ್ತು, ನೀರು ಬಿಡಬಾರದಿತ್ತು. ತಮಿಳುನಾಡಿನವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದ್ದಾರೆ. ಅರ್ಜಿ ವಿರುದ್ಧ ನಾವು ಸುಪ್ರೀಂ ಕೋರ್ಟ್ ಮುಂದೆ ಹೋಗಬೇಕಿತ್ತು. ನಂತರ ಸುಪ್ರೀಂ ಕೋರ್ಟ್ ತಿರ್ಮಾನಕ್ಕೆ ನಾವು ಬದ್ದರಾಗಬೇಕಿತ್ತು. ಸರ್ವ ಪಕ್ಷಗಳ ಸಭೆ ಕರೆದಾಗ ಜನ ಹಿತರಕ್ಷಣೆಗೆ ಒಳ್ಳೆಯ ಕೆಲಸ ಮಾಡಿ ನಾವು ಬೆಂಬಲ ಕೊಡ್ತಿವಿ ಅಂತ ಹೇಳಿದ್ದಿನಿ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯ ರೈತರು ಪ್ರತಿಭಟನೆ ಮಾಡಿದ್ರು. ರೈತರನ್ನು ಸುಪ್ರೀಂ ಕೋರ್ಟ್ ಗೆ ಹೋಗಿ ಅಂದ್ರು. ಇವರಿಗೆ ಪೇಪರ್ ಪೆನ್ ಕೊಟ್ಟಿದ್ದೇಕೆ? ಅಧಿಕಾರ ಕೊಟ್ಟಿರೋದು ರಕ್ಷಣೆ ಮಾಡಿ ಅಂತ. ನೀರಾವರಿ ಮಂತ್ರಿ ಹೇಳಿಕೆಯನ್ನು ಕೊಡುವುದು ಬಿಟ್ಟು ಸರಿಯಾದ ಕೆಲಸ ಮಾಡಿ. ಕಾನೂನು ತತ್ವಗಳ ಪಾಲನೆ. ಸಂಕಷ್ಟದ ಪರಿಹಾರದ ಸೂತ್ರ ಇಲ್ಲ. ಸುಪ್ರೀಂ ಕೋರ್ಟ್ ಹೇಳಿಲ್ಲ, ಟ್ರಿಬಿನಲ್ ಕೂಡ ಹೇಳಿಲ್ಲ. ಬೆಳೆ ಹಾಕಬೇಡಿ ನೀರು ಕೊಡಲ್ಲ ಅಂತ ಸರ್ಕಾರ ಹೇಳ್ತಿದೆ.

ರಾಜಕೀಯವಾಗಿ ಮಾತನಾಡ್ತಾರೆ ತಮಿಳುನಾಡಿಗೆ ಹಲವಾರು ಸಂದರ್ಭದಲ್ಲಿ ನೀರು ಕೊಟ್ಟಿದ್ದೇವೆ. ಇಂತಹ ಪರಿಸ್ಥಿತಿ ಇದ್ದಾಗ ಯೋಚನೆ ಮಾಡಿ ತಿರ್ಮಾನ ತೆಗೆದುಕೊಳ್ಳಬೇಕು. ನುರಿತ ತಜ್ಞರ ಜೊತೆ ಚರ್ಚೆ ಮಾಡಿ ತಿರ್ಮಾನ ತೆಗೆದುಕೊಳ್ಳಬೇಕು. ಸೂಕ್ಷ್ಮ ವಾದ ವಿಚಾರ ಇದು. ಕಾವೇರಿ ವಿಚಾರದಲ್ಲಿ ನಾನು ಮುಖ್ಯಮಂತ್ರಿ ಇದ್ದಾಗಲೇ ಟ್ರಿಬಿನಲ್ ವರದಿ ಕೊಟ್ಟಿದ್ದೇವೆ. ದೇವೇಗೌಡ್ರು ಸಲಹೇ ಮಾರ್ಗದರ್ಶನದ ಕೋರ್ಟ್ ಗೆ ಹೋದರಿಂದ ಹೋರಾಟದ ಫಲ.15 ಟಿಎಂಸಿ ನೀರು ಕರ್ನಾಟಕಕ್ಕೆ ಸಿಕ್ಕಿದೆ ಎಂದು ಹೇಳಿದರು.