ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಗೋವಿಂದಯ್ಯ ಯತೀಶ್ ಮಾಹಿತಿ ನೀಡಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು.
ಅಸ್ವಸ್ಥತೆ, ಮಾತಿನ ಅಸ್ಪಷ್ಟತೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಮುಂಜಾನೆ 3:40 ರ ಸುಮಾರಿಗೆ ಆಸ್ಪತ್ರೆಗೆ ಬಂದಿದ್ದರು. ಕೂಡಲೇ ಆರೋಗ್ಯ ತಪಾಸಣೆ ನಡೆಸಿ ಐಸಿಯುಗೆ ದಾಖಲಿಸಲಾಗಿತ್ತು. ನಂತರ ನರರೋಗ ತಜ್ಞ ಡಾ.ಪಿ.ಸತೀಶ್ ಚಂದ್ರ ಮತ್ತು ಅವರ ತಂಡ ಚಿಕಿತ್ಸೆ ನೀಡಲು ಆರಂಭಿಸಿತು.
“ಗೋಲ್ಡನ್ ಅವರ್” ಒಳಗೆ ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಕುಮಾರಸ್ವಾಮಿಯವರಿಗೆ ಮಿದುಳಿನ ಬಲಭಾಗದಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಚಿಕಿತ್ಸೆ ನೀಡಲಾಗಿತ್ತು. ಶೀಘ್ರಗತಿಯಲ್ಲಿ ಗುಣಮುಖರಾಗುತ್ತಿದ್ದಾರೆ. ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಆತಂಕ ಪಡುವ ಅಗತ್ಯವಿಲ್ಲ: ಪತ್ನಿ ಅನಿತಾ ಕುಮಾರಸ್ವಾಮಿ
ಆಸ್ಪತ್ರೆದೆ ದಾಖಲಿಸಿಕ ಕೂಡಲೇ ವೈದ್ಯರು ಎಂಆರ್ ಐ ಮತ್ತು ಸಿಟಿ ಸ್ಕ್ಯಾನ್ ಮಾಡಿ, ಚಿಕಿತ್ಸೆ ಆರಂಭಿಸಿದರು. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿಯವರು ಹೇಳಿದ್ದಾರೆ.
ನೆಗಡಿ, ಮೈ ನೋವು, ಜ್ವರದಿಂದ ಬಳಳುತ್ತಿದ್ದಾರೆ. ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ವೈದ್ಯರು ಹೇಳಿದ್ದಾರೆ. ಪ್ಯಾನಿಕ್ ಆಗಲು ಯಾವುದೇ ಕಾರಣವಿಲ್ಲ. ಜನರು ವದಂತಿಗಳಿಗೆ ಕಿವಿಕೊಡಬಾರದು ಎಂದು ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.