ಮನೆ ಅಪರಾಧ ಕಾರು ಅಪಘಾತ: ಸಚಿವ ಟಿ.ಬಿ.ಜಯಚಂದ್ರ ಪ್ರಾಣಾಪಾಯದಿಂದ ಪಾರು

ಕಾರು ಅಪಘಾತ: ಸಚಿವ ಟಿ.ಬಿ.ಜಯಚಂದ್ರ ಪ್ರಾಣಾಪಾಯದಿಂದ ಪಾರು

0

ತುಮಕೂರು(Tumkur): ಮಾಜಿ ಸಚಿವ ಟಿ ಬಿ ಜಯಚಂದ್ರ(T.B.Jayachandra) ಅವರು ಸಂಚರಿಸುತ್ತಿದ್ದ ಕಾರು(Car) ಅಪಘಾತವಾಗಿದ್ದು(Accident), ಮಾಜಿ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಮಕೂರು ತಾಲೂಕಿನಲ್ಲಿ ಹಾದುಹೋಗಿರೋ ರಾಷ್ಟ್ರೀಯ(National) ಹೆದ್ದಾರಿHighway)4ರ ಸಿಬಿ ಕ್ರಾಸ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಫಾರ್ಚೂನರ್ ಕಾರು ರಸ್ತೆ ಬದಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಗನ್​​ಮ್ಯಾನ್​ಗೂ ಕೂಡ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಗೊಂಡಿರುವ ಟಿ ಬಿ ಜಯಚಂದ್ರ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.