ಮನೆ ಸ್ಥಳೀಯ ಅಲಕೃಂತ ಗಜಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ

ಅಲಕೃಂತ ಗಜಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ

0

ಮೈಸೂರು: ವಿಶ್ವ ವಿಖ್ಯಾತ 413 ನೇ ಮೈಸೂರು ದಸರಾಗೆ ನಾಂದಿಯಾಡುವ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.

9.45 ರಿಂದ 10-15 ರ ನಡುವೆ ಸಲುವ ತುಲಾ ಶುಭ ಲಗ್ನದಲ್ಲಿ ಸಂಪ್ರದಾಯದಂತೆ ಮೈಸೂರು ಅರಮನೆ ಪುರೋಹಿತರಾದ ಪ್ರಹಲ್ಲಾದರಾವ್ ತಂಡ ವೀರನಹೊಸಹಳ್ಳಿ ಗೇಟ್ ಬಳಿಯ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನೆರೆವೇರಿಸಿದರು.

ಗಜಪಯಣದಲ್ಲಿ  ಅಭಿಮನ್ಯು ನೇತೃತ್ವದಲ್ಲಿ ಅರ್ಜುನ, ಭೀಮಾ, ಗೋಪಿ, ಧನಂಜಯಾ, ವರಲಕ್ಷ್ಮಿ, ವಿಜಯಾ, ಮಹೇಂದ್ರ ಹಾಗೂ ಕಂಜನ್ ಆನೆಗಳು ಮೈಸೂರಿಗೆ ಆಗಮಿಸಲಿದೆ.

ಅವರೊಂದಿಗೆ ಅರಣ್ ಸಚಿವ ಈಶ್ವರ ಖಂಡ್ರೆ, ಶಾಸಕ ಜಿ.ಡಿ. ಹರೀಶ್ ಗೌಡ, ಮೇಯರ್ ಶಿವಕುಮಾರ್, ಎಂ.ಎಲ್.ಸಿ. ಶಂಕರೇಗೌಡ ಡಿ.ಸಿಎಫ್. ಹರ್ಷಕುಮಾರ್ ನರಗುಂದ,  ಆರ್.ಎಫ್. ಸಂತೋಷ್,  ಆರ್.ಎಫ್ ಚಂದ್ರೇಶ್ ಇನ್ನೂ ಹಲವಾರು ಅಧಿಕಾರಿಗಳು ಇದ್ದರು.