ಮನೆ ಅಪರಾಧ ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ, ಮಗ ಸಾವು

ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ, ಮಗ ಸಾವು

0

ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ, ಮಗ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ವಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ.

ತಂದೆ ಪ್ರಭಾಕರ್ ಹುಂಡಿ(75), ಮಗ ಮಂಜುನಾಥ ಹುಂಡಿ(32) ಮೃತ ದುರ್ವೈವಿಗಳು.

ಮನೆ ಮುಂದಿನ ಕಸ ತೆಗೆಯುವಾಗ ನೆಲಕ್ಕೆ ಬಿದಿದ್ದ ವೈಯರ್ ತೆಗೆಯಲು ಹೋದಾಗ ವಿದ್ಯುತ್​ ಪ್ರವಹಿಸಿದೆ. ಇದರಿಂದ ನೆಲಕ್ಕೆ ಬಿದ್ದು ಒದ್ದಾಡುವುದನ್ನ ಕಂಡು ಪುತ್ರ ಮಂಜುನಾಥ್ ಸಹಾಯಕ್ಕೆ ಬಂದಿದ್ದಾನೆ. ಆಗ ಆತನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಪರಿಣಾಮ ತಂದೆ ಮಗ ಸಾವನ್ನಪ್ಪಿದ್ದಾರೆ.

ಹೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ತಂದೆ ಮಗ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ದೊಡವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.