ನವದೆಹಲಿ: 1995ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
1995ರಲ್ಲಿ ಬಿಹಾರದ ಸರನ್ ಜಿಲ್ಲೆಯ ಚಾಪ್ರಾದಲ್ಲಿ ವಿಧಾನಸಭಾ ಚುನಾವಣೆಯ ಮತದಾನದ ದಿನದಂದು ಇಬ್ಬರನ್ನು ಕೊಲೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿ ಬಿಹಾರದ ಮಹಾರಾಜ್ ಗಂಜ್ನ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರನ್ನು 2008ರಲ್ಲಿ ಪಾಟ್ನಾ ಹೈ ಕೋರ್ಟ್ ಖುಲಾಸೆಗೊಳಿಸಿತ್ತು.
ಆಗಸ್ಟ್ 18 ರಂದು, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಅಭಯ್ ಎಸ್ ಓಕಾ ಮತ್ತು ವಿಕ್ರಮ್ ನಾಥ್ ಅವರ ಪೀಠವು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ಮತ್ತು 307 ರ ಅಡಿಯಲ್ಲಿ ಸಿಂಗ್ ಅವರನ್ನು ಅಪರಾಧಿ ಎಂದು ಘೋಷಿಸಿತು. ಅಲ್ಲದೆ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ ೧ ರಂದು ಪ್ರಕಟಿಸುವುದಾಗಿ ಹೇಳಿತ್ತು.
ಅದರಂತೆ ಇಂದು ಪ್ರಕರಣದ ತೀರ್ಪನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್, ಎರಡೂ ಸಂತ್ರಸ್ತ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವಂತೆ ಸೂಚಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.