ಮನೆ ಅಪರಾಧ ದ್ವಿಚಕ್ರ ವಾಹನ ಅಪಘಾತ: ಪಾದಚಾರಿಗೆ ಗಂಭೀರ ಗಾಯ

ದ್ವಿಚಕ್ರ ವಾಹನ ಅಪಘಾತ: ಪಾದಚಾರಿಗೆ ಗಂಭೀರ ಗಾಯ

0

ಉಡುಪಿ: ನಗರದ ಹಳೆ ತಾಲೂಕು ಕಚೇರಿಯ ಬಳಿ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ ಪರಿಣಾಮ ಪಾದಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Join Our Whatsapp Group

ಸ್ಥಳೀಯರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಆಗಮಿಸಿದ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಇಬ್ಬರು ಗಾಯಾಳುಗಳನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ರಕ್ಷಿಸಲ್ಪಟ್ಟ ವ್ಯಕ್ತಿಗಳನ್ನು ಬೆಂಗಳೂರು ನಿವಾಸಿ ಹರಿಯಪ್ಪ (50), ಅಂಬಿಕಾ ಯಾದವ್ ಕರ್ಗಿ ಎಂದು ಗುರುತಿಸಲಾಗಿದೆ. ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು.